Breaking News

ಡೆಂಗ್ಯೂ ಜ್ವರಕ್ಕೆ ಅಗಸರಹಳ್ಳಿ ಗ್ರಾಮದ ಶಾಲಾ ಬಾಲಕಿ ಸಾವು ಮತ್ತೊಬ್ಬ ಬಾಲಕಿ ಅಸ್ವಸ್ಥ

ಮಂಡ್ಯ: ಜಿಲ್ಲೆಯ ಅಗಸರಹಳ್ಳಿ ಗ್ರಾಮದ ರವಿಕುಮಾರ್ ರಾಣಿ ದಂಪತಿಗಳ ಪುತ್ರಿ ಕೆ.ಆರ್.ಪೇಟೆ ಪಟ್ಟಣದ ಪ್ರಿಯದರ್ಶಿನಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಾವತಿ(7) ಮೃತ ದುರ್ದೈವಿಯಾಗಿದ್ದಾರೆ.ಈಕೆಯ ಸಹೋದರಿ ಪ್ರೇರಣ(5)ಕೂಡ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜೆಎಸ್ ಎಸ್ ಆಸ್ಪತ್ರೆಯಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹೇಮಾವತಿ ಮತ್ತು ಪ್ರೇರಣಾ ಸಹೋದರಿಯರು ಚಿಕಿತ್ಸೆ ಪಡೆಯುತ್ತಿದ್ದರು.ವೈದ್ಯರ ಸಲಹೆ ಮೇರೆಗೆ ಅಪೋಲೋ ಆಸ್ಪತ್ರೆಯಲ್ಲಿ ಸ್ಥಳಾಂತರಿಸಿ ಚಿಕಿತ್ಸೆ ಪಡೆಯುತ್ತಿದ್ದರು.ಇಂದು ಮುಂಜಾನೆ ಹೇಮಾವತಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರೆ ಈಕೆಯ ಸಹೋದರಿ ತೀವ್ರವಾಗಿ ಅಸ್ವಸ್ಥರಾಗಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಅಗಸರಹಳ್ಳಿ ಗ್ರಾಮದಲ್ಲಿ ಆತಂಕವು ಮನೆ ಮಾಡಿದೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *