Breaking News

ವರುಣನ ಆರ್ಭಟಕ್ಕೆ ಮನೆ ಕುಸಿತ ಲಕ್ಷಾಂತರ ರೂಪಾಯಿ ಹಾನಿ.

ಹುಬ್ಬಳ್ಳಿ: ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟಕ್ಕೆ ಜನರು ತತ್ತರಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ
ತಾಲೂಕಿನ ಅಲ್ಲಾಪುರ, ಗುಡೇನಕಟ್ಟಿ ಭಾಗದಲ್ಲಿ ಅಧಿಕ ಹಾನಿ ಉಂಟಾಗಿದೆ.
ಮಳೆಯ ರಭಸಕ್ಕೆ ಕುಂದಗೋಳ ತಾಲೂಕಿನಲ್ಲಿ ನಿಂಗಪ್ಪ ಮಡಿವಾಳರ ಎಂಬುವವರಿಗೆ ಸೇರಿದ ಮನೆ ಕುಸಿತಗೊಂಡಿದೆ. ಇದರಿಂದ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.
ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ.
ಅಷ್ಟೇ ಅಲ್ಲದೇ ಗುಡೇನಕಟ್ಟಿ ಭಾಗದಲ್ಲಿ ಜಮೀನಿಗೆ ಮಳೆ ನುಗ್ಗಿದ ನೀರು ನುಗ್ಗಿದ ಪರಿಣಾಮ
ಕೃಷಿ ಭೂಮಿಯು ಸಂಪೂರ್ಣ ಕೆರೆಯಾಗಿ ಮಾರ್ಪಟ್ಟಿದೆ. ಹಾಗೂ ಶೇಂಗಾ ಬೆಳೆ ಸಂಪೂರ್ಣ ಹಾಳಾಗಿದೆ.

Share News

About admin

Check Also

ಇಟ್ಟಂಗಿ ತುಂಬಿದ ಟೆಂಪೋ, ಬೈಕ್ ಡಿಕ್ಕಿ ಸವಾರ ಸಾವು.!!

ಇಟ್ಟಿಗೆ ತುಂಬಿದ ಟೆಂಪೋ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮನಸೂರ ಕ್ರಾಸ್ ಬಳಿ …

Leave a Reply

Your email address will not be published. Required fields are marked *