ಮಂಗಳೂರು: ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನೇತ್ರಾವತಿ, ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ
ಉಭಯ ನದಿಗಳು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ
ಐತಿಹಾಸಿಕ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇಗುಲದ ಬಳಿ ಸಂಗಮ ಸಾಧ್ಯತೆ ಹೆಚ್ಚಾಗಿದೆ.
ಈ ಐತಿಹಾಸಿಕ ಕ್ಷಣ ನೋಡಲು ಭಕ್ತಾಧಿಗಳ ಕಾತುರದಿಂದ ಕಾಯುತ್ತಿದ್ದಾರೆ.
ನೇತ್ರಾವತಿ ನದಿಗಳ ಅಪಾಯದ ಮಟ್ಟ 30.5 ಮೀ ಮೀರಿದ್ದು, ಸದ್ಯ ನೇತ್ರಾವತಿ ನದಿಯಲ್ಲಿ 30 ಮೀಟರ್ ನಲ್ಲಿ ನೀರು ಹರಿಯುತ್ತಿದೆ.
ನೇತ್ರಾವತಿ ನದಿಗಿಳಿಯುವ 38 ಮೆಟ್ಟಿಲುಗಳಲ್ಲಿ ಕೇವಲ ಒಂದು ಮೆಟ್ಟಿಲು ಮಾತ್ರ ಕಾಣಿಸುತ್ತಿದೆ.
ಉಭಯ ನದಿಗಳಲ್ಲಿ ಇನ್ನಷ್ಟು ನೀರು ಹರಿದು ಬಂದು ದೇವಾಲಯದ ಆವರಣದೊಳಗಡೆ ನೆರೆ ನೀರು ಪ್ರವೇಶಿಸಿದರೆ ಸಂಗಮ ಆಗುವ ಸಾಧ್ಯತೆಯಿದೆ.
ಸಂಗಮದ ಬಳಿಕ ದೇವಾಲಯದ ವತಿಯಿಂದ ಗಂಗಾಪೂಜೆ ನಡೆಯುತ್ತದೆ. ಬಳಿಕ
ದೇಗುಲದಲ್ಲಿ ಭಕ್ತಾಧಿಗಳು ಸಂಗಮ ಸ್ನಾನವನ್ನು ಮಾಡಬೇಕು ಎಂಬ ಪ್ರತೀತಿ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





