ಚಿಕ್ಕೋಡಿ: ಕಳೆದ ಹಲವು ದಿನಗಳಿಂದ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಬೆಳಗಾವಿ ಜಿಲ್ಲೆಯ ಜನತೆ ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಇಂತಹ ನಿರಾಶ್ರಿತರಿಗೆ ನಿರಾಶ್ರಿತರಿಗೆ ಊಟ ಹಾಗೂ ಬಿಸ್ಕೇಟ್ ವಿತರಣೆ ಮಾಡುವ ಮೂಲಕ ಕರ್ನಾಟಕ ನವ ನಿರ್ಮಾಣ ಪಡೆಯ ಯುವಕರು ಮಾನವೀಯತೆ ಮೆರೆದಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗದ ನಿರಾಶ್ರಿತರಿಗೆ ಯುವಕರು ಸಹಾಯ ಹಸ್ತ ಚಾಚಿದ್ದಾರೆ. ಜನರಿಗೆ
ಒಂದು ದಿನದ ಊಟ ಹಾಗೂ ಮಕ್ಕಳಿಗೆ ಬಿಸ್ಕೇಟ ನೀಡಿ ಸಹಾಯ ಮಾಡಿದ್ದಾರೆ.
ಅಷ್ಟೇ ಅಲ್ಲದೇ ಜಾನುವಾರುಗಳಿಗೆ ಒಂದು ಲೋಡ್ ಮೇವನ್ನೂ ಸಹ ವಿತರಣೆ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





