ಧಾರವಾಡ: ನಗರದ ಚಪ್ಪರಬಂದ ಕಾಲೋನಿಯಲ್ಲಿರುವ ತಮ್ಮನ್ನು ರಕ್ಷಿಸುವಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಸಂತ್ರಸ್ತ ದಂಪತಿ ಆರೋಪಿಸಿದ್ದಾರೆ.ಚಪ್ಪರಬಂದ ಕಾಲೋನಿಯ ದ್ರಾಕ್ಷಾಯಿಣಿ ಹಾಗೂ ಮಂಜುನಾಥ ದಂಪತಿ ಪ್ರವಾಹಕ್ಕೆ ಸಿಲುಕಿ ನಿರಾಶ್ರಿತರಾಗಿದ್ದಾರೆ. ಕೇವಲ 6 ಅಡಿ ಜಾಗದಲ್ಲಿ ಇವರು ವಾಸವಾಗಿದ್ದು, ಭಾರಿ ಮಳೆ ಹಿನ್ನೆಲೆ ಗಟಾರ ಪಕ್ಕದಲ್ಲಿರುವ ಮನೆ ಗೋಡೆ ಕುಸಿತವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.ಪ್ರವಾಹದ ಹಿನ್ನೆಲೆ ರಕ್ಷಣೆಗೆ ಮುಂದಾದ ಜಿಲ್ಲಾಡಳಿತ ನಮ್ಮತ್ತ ಗಮನ ಹರಿಸಿಲ್ಲವೆಂದು ದೂರಿದ್ದಾರೆ. ಪ್ರವಾಹದ ಮುನ್ಸೂಚನೆಯಿದ್ದರೂ ಯಾಕೆ ನಮ್ಮನ್ನು ಸ್ಥಳಾಂತರಿಸಿಲ್ಲ ಎಂದು ದಂಪತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





