ಮಂಡ್ಯ : ಬಕ್ರೀದ್ ಹಬ್ಬದ ವನ್ನು ಮುಸ್ಲಿಂ ಬಾಂಧವರು ಕೆ.ಆರ್.ಪೇಟೆಯಲ್ಲಿ ಸಡಗರ ಸಂಭ್ರಮದಿಂದ ಆಚರಣೆ ಮಾಡಿದರು.ಪಟ್ಟಣದ ಎಸ್.ಬಿ.ರಸ್ತೆಯಲ್ಲಿರುವ ಹಳೆ ಮಸೀದಿ ಆವರಣದಿಂದ ಸಾಮೂಹಿಕ ಮೆರವಣೆಗೆ ಹೊರಟ ಮುಸಲ್ಮಾನ್ ಬಾಂಧವರು ಸರ್ಕಾರಿ ಆಸ್ಪತ್ರೆ ಬಳಿ ಇರುವ ಈದ್ಗಾ ಮೈಧಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಪರಸ್ಪರ ಬಕ್ರೀದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.ಜಲಾ ಪ್ರವಾಹದಿಂದ ನಲುಗುತ್ತಿರುವ ನಾಡಿನ ಜನರನ್ನು ರಕ್ಷಿಸಬೇಕು. ಮುಂದೆ ಯಾವುದೇ ಅನಾಹುತ ಸಂಭವಿಸದಿರಲೆಂದು ಅಲ್ಲಾನಲ್ಲಿ ಪ್ರಾರ್ಥನೆ ಸಲ್ಲಿಸಿದರು.ಅನರ್ಹ ಶಾಸಕ ನಾರಾಯಣಗೌಡ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಟಿ.ಮಂಜು, ಜೆಡಿಎಸ್ ಹಿರಿಯ ಮುಖಂಡ ಬಸ್ ಕೃಷ್ಣೇಗೌಡ, ಪುರಸಭಾ ಸದಸ್ಯ ಕೆ.ಸಿ.ಮಂಜುನಾಥ್ ಮತ್ತಿತರರು ಮುಸಲ್ಮಾನ್ ಬಾಂಧವರಿಗೆ ಬಕ್ರೀದ್ ಶುಭಾಶಯ ಕೋರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





