Breaking News

ನೆರೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಆರ್ಥಿಕ ನೆರವು: ಯಡಿಯೂರಪ್ಪ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಪೀಡಿತ ಪ್ರದೇಶ ಗಳಿಗೆ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಬಳಿಕ ಮಾತನಾಡಿದ ಅವರು, ನೆರೆ ಯಿಂದ ಹಾನಿಗೊಳಗಿರುವ ಸಂತ್ರಸ್ತರಿಗೆ ಸರಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.ತಾತ್ಕಾಲಿಕ ಪ್ರತಿ ಕುಟುಂಬಕ್ಕೆ 10 ಸಾವಿರ ಪರಿಹಾರಸಂಪೂರ್ಣ ಹಾನಿ ಯಾದ ಮನೆಗೆ ಹೊಸಮನೆ ನಿರ್ಮಾಣ ಭರವಸೆ ನೀಡಿದರು.ನೆರೆ ಹಾವಳಿಯಿಂದ 321 ಮನೆ ಭಾಗಶಃ ಹಾನಿಗೊಳಗಾಗಿದ್ದು, 275 ಮನೆ ಸಂಪೂರ್ಣ ಹಾನಿಗೊಳಗಾಗಿವೆ. ಹೀಗಾಗಿ ತಾತ್ಕಾಲಿಕವಾಗಿ 5 ಸಾವಿರ ಬಾಡಿಗೆ ಮನೆ ನಿರ್ಮಿಸಲಾಗಿದೆ.ಪ್ರತಿ ಮನೆ ರಿಪೇರಿಗೆ 1 ಲಕ್ಷ ತಕ್ಷಣ ಪರಿಹಾರ ಒದಗಿಸಲಾಗುವುದು. 15 ದಿವಸದಲ್ಲಿ ಕೆಲಸ ಪ್ರಾರಂಭಿಸಲಾಗುವುದು. ಸೈಟ್ ಇಲ್ಲದವರಿಗೆ ಹೊಸ ಸೈಟ್ ನೀಡಲಾಗುತ್ತದೆ. ಕೃಷಿ, ಸಾರ್ವಜನಿಕ ಹಾನಿ ಸಂಬಂಧಿಸಿ ಸಮೀಕ್ಷೆ ಪಟ್ಟಿ ಮಾಡಿ ಪರಿಹಾರಕ್ಕೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.ಬೆಳ್ತಂಗಡಿ ತಾಲ್ಲೂಕುನಲ್ಲಿ ಮಳೆಯಿಂದ ಅಪಾರ ಹಾನಿ ಆಗಿದ್ದು ಕುಕ್ಕವು ಸೇತುವೆ ಹಾನಿ ಆಗಿದೆ .ಈ ಪ್ರದೇಶ ಕ್ಕೂ ಯಡಿಯೂರಪ್ಪ ಭೇಟಿ ನೀಡಿದರು .ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೆರೆ ಯಿಂದ ಆಗಿರುವ ಹಾನಿಯ ಕುರಿತು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಶಾಸಕರು ಸೇರಿದಂತೆ ಶಾಸಕರು ಜಿಲ್ಲಾಡಳಿತ ದ ಅಧಿಕಾರಿಗಳು ಉಪಸ್ಥಿತರಿದ್ದರು .

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *