Breaking News

ಶಿಮ್ಲಾ ಆಸ್ಪತ್ರೆಯಲ್ಲಿ ಪತ್ತೆಯಾದ ಪದ್ಮಾಗೆ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದು ಏನು ಗೊತ್ತಾ ?

ಬೆಂಗಳೂರು: ಸಕಾಲಕ್ಕೆ ನೇರವಾಗಿ ಮಾನವೀಯತೆ ಮೆರೆದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಂದಾಗಿ ಮಾನಸಿಕವಾಗಿ ಅಸ್ವಸ್ಥಳಾಗಿ ಶಿಮ್ಲಾ ಆಸ್ಪತ್ರೆಯಲ್ಲಿ ಕಳೆದ ಎರಡು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಪದ್ಮ ಗುರುವಾರ ತವರಿಗೆ ವಾಪಸ್ಸಾಗಿದ್ದಾರೆ.
ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಶಿಮ್ಲಾದಿಂದ ತವರಿಗೆ ಮರಳಿದ ಪದ್ಮಾರನ್ನು ಸಿಎಂ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಭೇಟಿಯಾದರು. ಅಷ್ಟೇ ಅಲ್ಲ ಪದ್ಮಾಳ ಮನವಿಗೆ ಸ್ಪಂಧಿಸಿದ ಕುಮಾರಣ್ಣ ಆಕೆಗೆ ಭರವಸೆಯನ್ನೂ ನೀಡಿದ್ದಾರೆ. 
ಮಾನವೀಯತೆ ಮೆರೆದ ಸಿಎಂ ಕುಮಾರಸ್ವಾಮಿ, ಶಿಮ್ಲಾದಿಂದ ತವರಿಗೆ ಮರಳಿದ ಪದ್ಮ
ಪದ್ಮಾಗೆ ಕುಮಾರಣ್ಣನ ಭರವಸೆ?
ತನಗೆ ವಾಸಿಸಲು ಮನೆ ಕಟ್ಟಿಸಿಕೊಡುವಂತೆ ಹಾಗೂ ತನ್ನ ಪತಿಯನ್ನು ಹುಡುಕಿಕೊಡುವಂತೆ ಪದ್ಮಾ ಮಾಡಿದ ಮನವಿಗೆ ಸ್ಪಂದಿಸಿದ ಕುಮಾರಣ್ಣ, ಆಕೆಯ ಚಿಕಿತ್ಸೆಗೆ ಮತ್ತು ಉತ್ತಮ ರೀತಿಯಲ್ಲಿ ಬದುಕು ನಡೆಸಲು ಅಗತ್ಯ ನೆರವು ನೀಡುವುದಾಗಿಯೂ, ಜೊತೆಗೆ ಆಕೆಯ ಪತಿಯನ್ನು ಹುಡುಕಿಸಿ ಕೊಡುವುದಾಗಿಯೂ ಭರವಸೆ ನೀಡಿದ್ದಾರೆ.
ಪದ್ಮಾಗೆ ಪುನರ್ವಸತಿ ಕಲ್ಪಿಸುವಂತೆ ಹಾಗೂ ಆಕೆಯ ಪತಿಯನ್ನು ಹುಡುಕಿಕೊಡುವಂತೆ ಸಿಎಂ ಕುಮಾರಸ್ವಾಮಿ ಮೈಸೂರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *