Breaking News

ಎನ್ಆರ್ ಸಿ ವಿಚಾರದಲ್ಲಿ ಕೈ ಯೂಟರ್ನ್, ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕಾಂಗ್ರೆಸ್ ಸ್ಪಷ್ಟನೆ

ಅಸ್ಸಾಂ ಕಾಂಗ್ರೆಸ್ ನಿಂದ ಸಲಹೆ ಬಂದ ಬೆನ್ನಲ್ಲೇ ನಿಲುವು ಬದಲಿಸಿದ ಕಾಂಗ್ರೆಸ್‌ನ  ಗ್ರಹ ಚಿತ್ರ
ನವದೆಹಲಿ: ಎನ್ಆರ್ ಸಿ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ನಿಲುವಿನಿಂದ ಕಾಂಗ್ರೆಸ್ ಯೂಟರ್ನ್ ಹೊಡೆದಿದ್ದು, ಎನ್ಆರ್ ಸಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದೆ.
ಪ್ರಮುಖವಾಗಿ ಅಸ್ಸಾಂ ನ ಅಕ್ರಮ ಬಾಂಗ್ಲಾ ವಲಸಿಗರಿಂದ ಮೂಲ ಅಸ್ಸಾಂ ನಿವಾಸಿಗರಿಗೆ ತೊಂದರೆಯಾಗುತ್ತಿದೆ ಎಂಬ ಭಾವನೆ ಆ ರಾಜ್ಯದಲ್ಲಿ ಬಲವಾಗಿ ನೆಲೆಯೂರಿದ್ದು, ಇದೇ ಕಾರಣಕ್ಕೆ ಇದೀಗ ಕಾಂಗ್ರೆಸ್ ಪಕ್ಷ ಕೂಡ ತನ್ನ ನಿಲುವು ಬದಲಿಸಿದೆ ಎನ್ನಲಾಗಿದೆ.
ಅಸ್ಸಾಂ ಕಾಂಗ್ರೆಸ್ ಘಟಕದ ನಾಯಕರು ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಕಾಂಗ್ರೆಸ್ ತನ್ನ ನಿಲುವು ಬದಲಿಸದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂಬ ಎಚ್ಚರಿಕೆಯನ್ನೂ ಅಸ್ಸಾಂ ನಾಯಕರು ನೀಡಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಎನ್ಆರ್ ಸಿಯನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸಿದೆ.
ಇನ್ನು ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗುಲಾಂನಬಿ ಆಜಾದ್ ಅವರು, ನಿಷ್ಠಾವಂತ ಭಾರತೀಯರನ್ನು ಯಾವುದೇ ಕಾರಣಕ್ಕೂ ಭಾರತದಿಂದ ಹೊರಗಿಡಬಾರದು ಎಂಬುದು ಕಾಂಗ್ರೆಸ್ ನಿಲುವಾಗಿದ್ದು, ಯಾವುದೇ ಕಾರಣಕ್ಕೂ ಎನ್ ಆರ್ ಸಿ ವಿಚಾರದಲ್ಲಿ ರಾಜಕೀಯ ಬೇಡ. ಎನ್ಆರ್ ಸಿಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ಬೆಂಬಲಿಸುತ್ತದೆ. ಆದರೆ ಅಂತಿಮ ಪಟ್ಟಿ ಬಿಡುಗಡೆ ಸಂದರ್ಭದಲ್ಲಾಗುವ ವೈಪರೀತ್ಯಗಳ ಕುರಿತು ಕಟ್ಟೆಚ್ಚರ ವಹಿಸಬೇಕು ಎಂದು ಅವರು ರಾಜ್ಯಸಭೆಯಲ್ಲಿ ಹೇಳಿದರು.
ಸಂಬಂಧಿಸಿದ್ದು…
ಎನ್ ಆರ್ ಸಿ ವಿಚಾರ: ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಮತ್ತೊಂದು ಎಫ್ ಐಆರ್  05, 2018
ಯಾವುದೇ ಭಾರತೀಯ ನಾಗರಿಕನ ಹೆಸರು ಎನ್ಆರ್ ಸಿ ಪಟ್ಟಿಯಿಂದ ಕೈ ಬಿಡುವುದಿಲ್ಲ: ರಾಜನಾಥ್ ಸಿಂಗ್ 03, 2018
ಅಸ್ಸಾಂ ಎನ್ಆರ್ ಸಿ ಬಗ್ಗೆ ಮಮತಾ ಬ್ಯಾನರ್ಜಿ ದ್ವಿಮುಖ ನೀತಿ: ಕಾಂಗ್ರೆಸ್
Share News

About Shaikh BIG TV NEWS, Hubballi

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *