Breaking News

ಶ್ರೀನಗರದಲ್ಲಿ ಎನ್’ಕೌಂಟರ್: ಓರ್ವ ಪೊಲೀಸ್ ಹುತಾತ್ಮ, 3 ಯೋಧರಿಗೆ ಗಾಯ..

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗದಲ್ಲಿರುವ ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರ ದಾಳಿ ನಡೆಸಿದ್ದು, ಈ ಹಿನ್ನಲೆಯಲ್ಲ ಉಗ್ರರ ವಿರುದ್ಧ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸುತ್ತಿದೆ ಎಂದು ಭಾನುವಾರ ತಿಳಿದುಬಂದಿದೆ. 
ಬಟಾಮಲೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿವೆ. ಈ ವೇಳೆ ಉಗ್ರರು ಇದ್ದಕ್ಕಿದ್ದಂತೆಯೇ ಸೇನೆಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 
ಈ ವೇಳೆ ಉಗ್ರರ ಅಡಗಿರುವ ತಾಣವನ್ನು ಸುತ್ತುವರೆದ ಭದ್ರತಾ ಪಡೆಗಳು ಉಗ್ರರ ವಿರುದ್ಧ ಎನ್ ಕೌಂಟರ್ ನಡೆಸಲು ಮುಂದಾಗಿದ್ದಾರೆ. ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದು, ಮೂವರು ಸಿಆರ್’ಪಿಎಫ್ ಯೋಧರಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.
Share News

About Shaikh BIG TV NEWS, Hubballi

Check Also

ಅನಂತಕುಮಾರ ಹೆಗಡೆ ವಿರುದ್ಧ ತೀವ್ರ ವಾಗ್ದಾಳಿ….

ದಾವಣಗೆರೆ: ಮುಖ್ಯ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಏಕವಚನದಲ್ಲಿ ಬಿಜೆಪಿ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮಾತನಾಡಿರುವ ಕುರಿತು …

Leave a Reply

Your email address will not be published. Required fields are marked *

You cannot copy content of this page