Breaking News

ಕೊಡಗು ಪ್ರವಾಹ: ನಾನ್ ವೆಜ್ ಊಟ ತ್ಯಜಿಸಿ ಖೈದಿಗಳಿಂದ ಸಂತ್ರಸ್ತರಿಗೆ ನೆರವು..

ಬಳ್ಳಾರಿ: ಭೀಕರ ಪ್ರವಾಹದಿಂದಾಗಿ ಅಕ್ಷರಶಃ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಗೆ ರಾಜ್ಯದ ಹಲವು ಸಂಘಟನೆಗಳು ನೆರವಿನ ಮಹಾಪೂರವನ್ನೇ ಹರಿಸುತ್ತಿವೆ. ಈ ಬೆನ್ನಲ್ಲೇ ಬಳ್ಳಾರಿ ಕಾರಾಗೃಹದ ಖೈದಿಗಳು ವಿಭಿನ್ನ ರೀತಿಯಲ್ಲಿ ದೇಣಿಗೆ ನೀಡಲು ನಿರ್ಧರಿಸಿದ್ದಾರೆ. 

ಕಾರಾಗೃಹದಲ್ಲಿ ಖೈದಿಗಳಿಗೆ ವಾರಕ್ಕೆ ಎರಡು ದಿನ, ಅಂದರೆ ಶನಿವಾರ ಮತ್ತು ಭಾನುವಾರ ಮಾಂಸಾಹಾರ ಊಟ ನೀಡಲಾಗುತ್ತದೆ. ಆದರೆ ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಜನತೆಗೆ ತಾವೂ ತಮ್ಮ ಕೈಲಾದಷ್ಟು ನೆರವು ನೀಡಬೇಕೆಂದು ನಿರ್ಧರಿಸಿರುವ ಖೈದಿಗಳು, “ನಮಗೆ ಒಂದು ತಿಂಗಳು ನಾನ್ ವೆಜ್ ಊಟ ಬೇಡ, ಆ ಹಣವನ್ನು ಪ್ರವಾಹ ಸಂತ್ರಸ್ತರ ನೆರವಿಗೆ ಕೊಡಿ” ಎಂದಿದ್ದಾರೆ. ಕಾ ರಾಗೃಹದಲ್ಲಿ ನಾಲ್ಕು ವಾರಗಳ ಕಾಲ ಮಾಂಸಾಹಾರ ತ್ಯಜಿಸಿದರೆ ಕನಿಷ್ಠ 2 ರಿಂದ 3 ಲಕ್ಷ ರೂಪಾಯಿ ಸಂಗ್ರಹವಾಗುತ್ತದೆ. ಹಾಗಾಗಿ ಆ ಹಣವನ್ನು ಪ್ರವಾಹ ಪರಿಹಾರ ನಿಧಿಗೆ ನೀಡಲು ಖಿದಿಗಳು ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹಾಗಾಗಿ ಈ ಮನವಿಗೆ ಜೈಲು ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರ ಸ್ಪಂದಿಸಿದ್ದಾರೆ ಎನ್ನಲಾಗಿದೆ.

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *