Breaking News

ಕುಮಾರಸ್ವಾಮಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಾಕಿ ಉಳಿದಿರುವ 150 ಕೋಟಿ ಪಿಂಚಣಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಹಾಗೂ ಅವಳಿ ನಗರಕ್ಕೆ ಕೇಂದ್ರ ಸರ್ಕಾರ ನೀಡಿದ ಸಿ ಆರ್ ಎಫ್ ಅನುದಾನ ಬಳಕೆ ಮಾಡುವಂತೆ ಒತ್ತಾಯಿಸಿ‌ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಧರಣಿ ನಡೆಸಿದರು. 
ನಗರದ ಮಿನಿ ವಿಧಾನ ಸೌಧ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. 
ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಾಲಿಕೆಯ 150ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳಿ ಮಾತು ತಪ್ಪಿದೆ. ಹೀಗಿನ ಸಮಿಶ್ರ ಸರ್ಕಾರದ  ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೂಡ ಪಾಲಿಕೆಯ ಪಿಂಚಣಿ ಹಣದ ಕುರಿತು ನಿರ್ಲಕ್ಷ್ಯ ಧೋರಣೆ ಮಾಡುತ್ತಿದ್ದಾರೆ ಎಂದು ದೂರಿದರು. ಅಲ್ಲದೇ ಕೇಂದ್ರ ಸರ್ಕಾರ ಅವಳಿ ನಗರಕ್ಕೆ ಸಿ ಆರ್ ಎಫ್ ಅನುದಾನ ಬಿಡುಗಡೆ ಮಾಡಿದೆ, ಆದ್ರೆ ಆ ಅನುದಾನವನ್ನು ಬಳಕೆ ಮಾಡಿಕೊಳ್ಳದೇ ಅವಳಿನಗರವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. 
ಕೂಡಲೇ ರಾಜ್ಯ ಸರ್ಕಾರ ಮಹಾನಗರ ಪಾಲಿಕೆಯ ಪಿಂಚಣಿ ಹಣ ಹಾಗೂ ಕೇಂದ್ರ ಸರ್ಕಾರ ಅವಳಿನಗಕ್ಕೆ ಬಿಡುಗಡೆ ಮಾಡಿದ ಅನುದಾನ ಬಳಕೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.
Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *