ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಇತ್ತೀಚೆಗಷ್ಟೇ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದು ತಮ್ಮದೇ ಪಾರ್ಟಿ ಘೋಷಣೆ ಮಾಡುತ್ತಾರೆ ಅಂತ ಹೇಳಲಾಗಿತ್ತು. ಆದರೆ ಇದೀಗ ತಲೈವಾ ದೆಹಲಿಯಲ್ಲಿ ಬಿಜೆಪಿ ವರಿಷ್ಠರ ಜೊತೆ ಸರಣಿ ಸಭೆ ನಡೆಸಿರುವುದು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಮಾಸ್ಟರ್ ಪ್ಲಾನ್ ಹೆಣೆಯುತ್ತಿದ್ದಾರೆ. ಆದರೆ ಉತ್ತರಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಕರ್ನಾಟಕ ಹೊರತುಪಡಿಸಿದರೆ ಬೇರೆ ರಾಜ್ಯಗಳಲ್ಲಿ ಬಿಜೆಪಿ ಹವಾ ಅಷ್ಟಿಲ್ಲ. ಹೀಗಾಗಿಯೇ ಬಿಜೆಪಿ ಈ ಭಾಗದ ದಿಗ್ಗಜ ನಾಯಕರನ್ನು ಪಕ್ಷ ಸೆಳೆದು ದಕ್ಷಿಣ ಭಾರತದಲ್ಲಿ ಅಧಿಕಾರ ಹಿಡಿಯಲು ಪ್ಲಾನ್ ಮಾಡುತ್ತಿದೆ. ಇತ್ತೀಚೆಗಷ್ಟೇ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಪ್ರಧಾನಿ ಮೋದಿ ಭೇಟಿ ನಂತರ ರಜನಿಕಾಂತ್ ದೆಹಲಿಯಲ್ಲಿ ಬಿಜೆಪಿ ನಾಯಕರ ಭೇಟಿ ಭಾರೀ ಚರ್ಚೆಗೆ ಕಾರಣವಾಗಿದೆ.
ದೆಹಲಿಯಲ್ಲಿ ಬೀಡು ಬಿಟ್ಟಿರುವ ರಜನಿಕಾಂತ್ ಅವರು ಅಮಿತ್ ಶಾ ಸೇರಿದಂತೆ ಹಲವು ನಾಯಕರ ಜೊತೆ ಸತತ 5 ದಿನದಲ್ಲಿ 7 ಸರಣಿ ಸಭೆ ನಡೆಸಿ ಮುಂದಿನ ರಾಜಕೀಯ ನಡೆ ಕುರಿತು ಚರ್ಚೆ ನಡೆಸಿದ್ದಾರೆ.
ರಜನಿಕಾಂತ್ ರಾಜಕೀಯ ಪ್ರವೇಶದ ಘೋಷಣೆ ಮಾಡಿದ್ದರು ಆದರೆ ಇನ್ನು ಪಕ್ಷ ಘೋಷಣೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ರಜನಿಕಾಂತ್ ಪಾರ್ಟಿ ಘೋಷಣೆ ಮಾಡಿದರೂ, ಬಿಜೆಪಿ ಜೊತೆ ಪಕ್ಷ ವಿಲೀನಗೊಳಿಸಿ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ಯೋಜನೆ ರೂಪಿಸುತ್ತಿದ್ದಾರೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





