Breaking News

19 ದಿನಗಳ ಬಳಿಕ ಉಪವಾಸ ಹಾರ್ದಿಕ್ ಪಟೇಲ್

ಅಹಮದಾಬಾದ್: ಪಟೇದಾರ್ ಕೋಟಾ (ಪಟೇಲ್ ಮೀಸಲಾತಿ) ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಬುಧವಾರ ತಮ್ಮ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. 
ಪಟೇಲ್ ಸಮುದಾಯದ ಎರಡು ಮುಖ್ಯ ಸಾಮಾಜಿಕ-ಧಾರ್ಮಿಕ ಸಂಸ್ಥೆಗಳಾದ ಖೋಡಾಲ್ ಧಾಮ್ ಹಾಗೂ ಉಮ್ಯಾಧಾಮ್ ಗಳ ಮುಖಂಡರಾದ ಹಾರ್ಡಿಕ್ ಅವರ ನಿಕಟ ಸಹಾಯಕ ಮತ್ತು ಪಟಿದರ್ ಅನಾಮತ್ ಆಂದೋಲನ ಸಮಿತಿಯ ಸಂಚಾಲಕ ಮನೋಜ್ ಪನಾರಾ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವನ್ನು ಘೋಷಿಸಿದ್ದಾರೆ.
ಪಟೇಲ್ ಸಮುದಾಯಕ್ಕೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕು, ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಹಾರ್ದಿಕ್ ಪಟೇಲ್ ಆಗಸ್ಟ್ 25ರಿಂದ ಉಪವಾಸ ಸತ್ಯಾಗ್ರಹದಲ್ಲಿ ತೊಡಗಿದ್ದರು.
ಅಲ್ಲದೆ 2015ರಲ್ಲಿ ನಡೆದ ಕಾನೂನು ಬಾಹಿರ ಘಟನೆಯಲ್ಲಿ ಬಂಧಿತನಾಗಿದ್ದ ಹಾರ್ದಿಕ್ ಆಪ್ತ ಅಲ್ಪೇಶ್ ಕಟಾರಿಯಾ ಅವರನ್ನು ಬಿಡುಗಡೆಗೊಳಿಸಬೇಕೆಂದು ಸಹ ಹಾರ್ದಿಕ್ ಪಟೇಲ್ ಬೇಡಿಕೆ ಇಟ್ಟಿದ್ದರು.
ಕಳೆದ 14 ದಿನಗಳಲ್ಲಿ ಸರ್ಕಾರವು ಹಾರ್ಡಿಕ್ ಜೊತೆ ಮಾತುಕತೆ ನಡೆಸಲು ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಅವರ ಬೆಂಬಲಿಗರು ಆರೋಪಿಸಿದ್ದಾರೆ. ಆದರೆ ಇದೇ ವೇಳೆ ಗುಜರಾತಿನ ಇಂಧನ ಸಚಿವ ಸೌರಬ್ ಪಟೇಲ್ ಸರ್ಕಾರದೊಡನೆ ಮಾತುಕತೆ ನಡೆಸಲು ಬಯಸುವವರಿಗೆ “ಬಾಗಿಲು ತೆರೆದಿದೆ” ಎಂದು ಹೇಳಿದ್ದರು
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *