Breaking News

ಕೊಳಚೆ ಪ್ರದೇಶ ಮುಕ್ತಕ್ಕೆ ಆದ್ಯತೆ..

ಬೆಂಗಳೂರು: ನಗರದಲ್ಲಿ ಸ್ಲಂಗಳನ್ನು ಮುಕ್ತಗೊಳಿಸುವ‌ ಮೂಲಕ ಅವರಿಗೆ ಉತ್ತಮ ಜೀವನ ಕಟ್ಟಿಕೊಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.‌
ಬಿಬಿಎಂಪಿ ಯಲಹಂಕ ಉಪನಗರ ವಾರ್ಡ್ 4 ವ್ಯಾಪ್ತಿಯ‌ ಡಾ.ಬಿ.ಆರ್. ಅಂಬೇಡ್ಕರ್ ನಗರದಲ್ಲಿರುವ 259 ದಲಿತ ಮತ್ತು ಹಿಂದುಳಿದ ಕುಟುಂಬಗಳಿಗೆ ನಿವೇಶನದ ಕ್ರಯಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ಯಲಹಂಕದ ಅಂಬೇಡ್ಕರ್ ಭವನದಲ್ಲಿ ಹಲವು ವರ್ಷದಿಂದ‌ವಾಸವಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಇಂದು ಕ್ರಯ ಪತ್ರ ವಿತರಿಸುತ್ತಿದ್ದು , ಈ ಆಸ್ತಿಯ ಹಕ್ಕನ್ನು ನೀಡಲಾಗುತ್ತಿದೆ ಎಂದರು.
ನಗರದ ಕೆಲವೆಡೆ ಕೊಳಚೆ ಪ್ರದೇಶದಲ್ಲಿ ಜನರು‌ ಅತ್ಯಂತ ಚಿಕ್ಕ ಸ್ಥಳದಲ್ಲಿ ವಾಸವಿದ್ದಾರೆ. ಸ್ಲಂಗಳಲ್ಲಿ ಮೂಲಸೌಕರ್ಯ ಒದಗಿಸಿಕೊಡುವ ಕೆಲಸ ಮಾಡಲಾಗುತ್ತಿದೆ ಎಂದರು.‌ ಈ ಭಾಗದಲ್ಲಿ ಕಾವೇರಿ ಕುಡಿಯುವ ನೀರಿನ ಯೋಜನೆಗಾಗಿ 32 ಲಕ್ಷ ರೂ. ಒದಗಿಸಿಕೊಡಲಾಗಿದೆ ಎಂದು ತಿಳಿಸಿದರು.
Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *