Breaking News

ಗಂಗಾಂಬಿಕೆ ನೂತನ ಮೇಯರ್‌?: ಡಿಸಿಎಂ ಪರಮೇಶ್ವರ್‌ಗೆ ಮುಖಭಂಗ.

ಬೆಂಗಳೂರು: ಕುತೂಹಲ ಕೆರಳಿಸಿದ್ದ ಕಾಂಗ್ರೆಸ್​ ಮೇಯರ್​ ಅಭ್ಯರ್ಥಿ ಆಯ್ಕೆ ಗೊಂದಲ ಕೊನೆಗೆ ಬಗೆಹರಿದಿದೆ. ಪಕ್ಷೇತರ ಪಾಲಿಕೆ ಸದಸ್ಯರು ಸೇರಿದಂತೆ, ರಾಮಲಿಂಗಾರೆಡ್ಡಿ ಬೆಂಬಲಿತ ಶಾಸಕರು ಗಂಗಾಂಬಿಕೆ ಪರ ಬ್ಯಾಟಿಂಗ್ ಮಾಡುತ್ತಿರುವುದರಿಂದ ಮೇಯರ್​ ಪಟ್ಟ ಶಾಸಕ ರಾಮಲಿಂಗ ರೆಡ್ಡಿ ಬೆಂಬಲಿತ ಜಯನಗರ ಕಾರ್ಪೊರೇಟರ್​ ಗಂಗಾಂಬಿಕೆಗೆ ಬಹುತೇಕ ಖಚಿತ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಹೆಸರನ್ನು ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಎರಡನೇ ಬಾರಿಯೂ ಶಾಂತಿನಗರ ವಾರ್ಡ್‌ ಕಾರ್ಪೋರೇಟರ್‌ ಸೌಮ್ಯ ಶಿವಕುಮಾರ್‌ ಅವರಿಗೆ ಮೇಯರ್ ಸ್ಥಾನ ತಪ್ಪಿದೆ. ಇದರಿಂದ ಡಿಸಿಎಂ ಪರಮೇಶ್ವರ್​ಗೆ ಮುಖಭಂಗವಾಗಿದ್ದು, ಶಾಸಕ ರಾಮಲಿಂಗ ರೆಡ್ಡಿ ಮೇಲುಗೈ ಸಾಧಿಸಿದ್ದಾರೆ

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *