Breaking News

೧೩ ಜಾನುವಾರುಗಳು ಸುಟ್ಟು ಕರಕಲಾದವು, ಬೆಂಕಿಯ ಕೆನ್ನಾಲಿಗೆಗೆ ಕೊಟ್ಟಿಗೆ ಸಂಪೂರ್ಣ ಭಸ್ಮ..

ಆಂಕರ್- ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ
ಕೊಟ್ಟಿಗೆಯಲ್ಲಿ ಕಟ್ಟಿದ 13 ಜಾನುವಾರುಗಳ ಸಜೀವ ದಹನವಾಗಿರುವ ಘಟನೆ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ನಡೆದಿದೆ.‌
ಅಡಿವಯ್ಯ ಹಿರೇಮಠ್ ಅವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ಅವಘಡ ಸಂಭವಿಸಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆಕಸ್ಮಿಕ ಬೆಂಕಿಗೆ ಜಿವನಾಧಾರವಾಗಿದ್ದ 13  ಜಾನುವಾರುಗಳು ಬೆಂಕಿಗೆ ಆಹುತಿಯಾಗಿವೆ.  
ಬೆಂಕಿಯ ಕೆನ್ನಾಲಿಗೆಗೆ ಕೊಟ್ಟಿಗೆ  ಸಂಪೂರ್ಣ ಸುಟ್ಟು ಕರಕಲಾಗಿದ್ದು, ಜಾನುವಾರುಗಳು ಸುಟ್ಟು ಹೋಗಿವೆ. ಅದೃಷ್ಟವಶಾತ್ ಕೊಟ್ಟಿಗೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಜೀವ ಹಾನಿ‌ ಸಂಭವಿಸಿಲ್ಲ.‌ ವಿಷಯ ತಿಳಿಯುತ್ತಿದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ  ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *