Breaking News

ಲೈಂಗಿಕ ಕಿರುಕುಳದ ಆರೋಪ: ಕೇಂದ್ರ ಸಚಿವ ಎಂ.ಜೆ.ಅಕ್ಬರ್ ರಾಜೀನಾಮೆಗೆ ಪಟ್ಟು ಹಿಡಿದ ಕಾಂಗ್ರೆಸ್

ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಬಂದಿರುವ ಹಿನ್ನಲೆಯಲ್ಲಿ ಅವರು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದೆ.
ನವದೆಹಲಿ: ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರ ಮೇಲೆ ಲೈಂಗಿಕ ಕಿರುಕುಳದ ಆರೋಪ ಬಂದಿರುವ ಹಿನ್ನಲೆಯಲ್ಲಿ ಅವರು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದೆ.
ಈಗ ಕೇಂದ್ರ ಸಚಿವ ಅಕ್ಬರ್ ಮೇಲೆ ಬಂದಿರುವ ಆರೋಪದ ಕುರಿತಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಜೈಪಾಲ್ ರೆಡ್ಡಿ ” ಕೇಂದ್ರ ಸಚಿವರು ಈ ಆರೋಪಗಳಿಗೆ ತೃಪ್ತಿದಾಯಕ ಉತ್ತರಗಳನ್ನು ನೀಡಬೇಕು ಇಲ್ಲವೇ ರಾಜಿನಾಮೆ ನೀಡಬೇಕು.ಅಲ್ಲದೆ ಈ ವಿಚಾರವಾಗಿ ಸುದೀರ್ಘ ತನಿಖೆಯನ್ನು ನಡೆಸಬೇಕು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ ವಕ್ತಾರ್ ಮನೀಶ್ ತಿವಾರಿ ಮಾತನಾಡಿ”ಸಚಿವರ ಮೇಲೆ ಬಂದಿರುವ ಆರೋಪಕ್ಕೆ ಮೌನವು ಆಯ್ಕೆಯಲ್ಲ.ಇದು ಗಂಭೀರ ವಿಷಯವಾಗಿದೆ.ಆದ್ದರಿಂದ ಸಚಿವರು  ಮಾತನಾಡುವ ಅಗತ್ಯವಿದೆ, ಪ್ರಧಾನಿಗಳು ಕೂಡ ವಿಚಾರವಾಗಿ ಮಾತನಾಡಬೇಕೆಂದು ನಾವು ಕೇಳಿಕೊಳ್ಳುತ್ತೇವೆ ಎಂದು ಮನೀಶ್ ತಿವಾರಿ ತಿಳಿಸಿದ್ದಾರೆ.
ಇತ್ತ ಬಿಜೆಪಿ ಈ ವಿಚಾರವಾಗಿ ಮಾತನಾಡಲು ನಿರಾಕರಿಸಿದೆ. ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಬಳಿ ಸಚಿವರ ಮೇಲಿನ ಲೈಂಗಿಕ ಆರೋಪದ ಬಗ್ಗೆ ಕೇಳಿದಾಗ ಅವರು ಇದಕ್ಕೆ ಉತ್ತರಿಸಲು ನಿರಾಕರಿಸಿ ತಾವು ಗುಜರಾತಿನಲ್ಲಿ ವಲಸಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯದಲ್ಲಿ ಕಾಂಗ್ರೆಸ್ ಪಾತ್ರದ ಕುರಿತಾಗಿ ಮಾತನಾಡಲು ಬಂದಿರುವುದಾಗಿ ತಿಳಿಸಿದರು.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *