ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಶರತ್ಗುಂಡ್ ಬಾಲಾದ ಬಳಿ ಎನ್ಕೌಂಟರ್ ನಡೆಯುತ್ತಿದ್ದು, ಇಬ್ಬರು ಅಥವಾ ಮೂವರು ಉಗ್ರರು ಸೆರೆಯಾಗಿದ್ದಾರೆಂದು ತಿಳಿದುಬಂದಿದೆ. ಉಗ್ರನಾಗಿ ಬದಲಾದ ಆಲಿಘಡ್ ಮುಸ್ಲಿಂ ಯೂನಿವರ್ಸಿಟಿಯ ವಿದ್ಯಾರ್ಥಿ ಮನಾನ್ ವಾಣಿ ಕೂಡ ಸೆರೆಯಾಗಿರುವ ಉಗ್ರರಲ್ಲಿ ಒಬ್ಬನಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇನ್ನು ಈ ಪ್ರದೇಶದಲ್ಲಿ ಶಾಲಾ ಕಾಲೇಜುಗಳನ್ನ ಮುಚ್ಚಲಾಗಿದ್ದು, ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಭದ್ರತಾ ಪಡೆಯ ಕಾರ್ಯಾಚರಣೆ ಮುಂದುವರೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





