Breaking News

ಮೈಗೂರು, ಸಾವಳಗಿ ಪಂ.ವ್ಯಾಪ್ತಿಯ ಎಲ್ಲಾ ರಸ್ತೆಗಳಿಗೂ ಇನ್ನು‌ 3 ತಿಂಗಳಲ್ಲಿ ಡಾಂಬರೀಕರಣ

ಜಮಖಂಡಿ: ಮೈಗೂರು ಹಾಗೂ ಸಾವಳಗಿ ಪಂಚಾಯತಿ ವ್ಯಾಪ್ತಿಯಲ್ಲಿ ಇನ್ನು‌ ಮೂರು ತಿಂಗಳ ಒಳಗಾಗಿ ಎಲ್ಲ ರಸ್ತೆಗಳಿಗೂ ಡಾಂಬರೀಕರಣ ಮಾಡಿಕೊಡುವ ಜವಾಬ್ಧಾರಿ ನನ್ನದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆ ಭಾಗದ ಜನರಿಗೆ ಭರವಸೆ ನೀಡಿದರು.‌ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ಕೂಡ ವಿವಿಧ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.‌ಬಳಿಕ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ಸಿದ್ದು ನ್ಯಾಮಗೌಡರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ಇಡೀ ಕ್ಷೇತ್ರದಲ್ಲಿ ಉತ್ತಮ ಸ್ಪಂದನೆ ಇದೆ. ಅವರು ಈ ಕ್ಷೇತ್ರವನ್ನು ಇನ್ನಷ್ಟು ಎತ್ತರದ ಮಟ್ಟಕ್ಕೆ ತೆಗೆದುಕೊಂಡು ಹೋಗುವ ಹಾಗೂ ಅಭಿವೃದ್ಧಿ ಕೆಲಸ ಕೈಗೊಳ್ಳುವ ಬಗ್ಗೆ ಉತ್ಸಕರಾಗಿದ್ದರು. ಆದರೆ ಅವರು ಇಂದು ನಮ್ಮೊಂದಿಗಿಲ್ಲ. ಈಗ ಅವರ ಮಗ ಆನಂದ ಸಿದ್ದು ನ್ಯಾಮಗೌಡ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದು, ಈ ಕ್ಷೇತ್ರದ ಅಭಿವೃದ್ಧಿ ಹೊಣೆಗಾರಿಕೆ ಹೊತ್ತಿದ್ದಾರೆ ಎಂದರು.ಈ ಭಾಗದಲ್ಲಿ ಡಾಂಬರೀಕರಣದ ಸಮಸ್ಯೆ ಕೇಳಿ ಬಂದಿದೆ.‌ಇನ್ನು ಮೂರು ತಿಂಗಳೊಳಗಾಗಿ ಮಾಡಿಕೊಡಲಿದ್ದೇನೆ ಎಂದು ಪರಮೇಶ್ವರ್ ಭರವಸೆ ನೀಡಿದರು.‌

Share News

About Shaikh BIG TV NEWS, Hubballi

Check Also

Featured Video Play Icon

ಚುನಾವಣೆ ಅಧಿಕಾರಿಗಳ ಹಾಗೂ ಪೊಲೀಸರ ವಿರುದ್ಧ ಮಠಾಧೀಶರ ಹೋರಾಟ: ಕ್ಷಮೆಯಾಚನೆ ಮಾಡಿದ ಖಾಕಿ…

ಹುಬ್ಬಳ್ಳಿ: ಅವರೆಲ್ಲರೂ ನಾಡಿನ ವಿವಿಧ ಮಠಗಳ ಮಠಾಧೀಶರು. ಮತದಾನದ ಜಾಗೃತಿ ಕುರಿತು ಸಭೆ ನಡೆಸುವ ಸಂದರ್ಭದಲ್ಲಿ ನಡೆದ ಅದೊಂದು ಗಲಾಟೆ …

Leave a Reply

Your email address will not be published. Required fields are marked *

You cannot copy content of this page