ಬೆಂಗಳೂರು: ರಾಜ್ಯದಲ್ಲಿ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಪ್ರಚಾರ ಜೋರಾಗಿದೆ. ಆದ್ರೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೋಸ್ತಿ ಪಕ್ಷವಾದ ಕಾಂಗ್ರೆಸ್ನ ಅಭ್ಯರ್ಥಿಗಳ ಪರ ಮತಯಾಚನೆ ಮಾಡುವುದು ಸಂಶಯ ಎನ್ನಲಾಗ್ತಿದೆ. ಕುಮಾರಸ್ವಾಮಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮಾತ್ರ ಅಖಾಡಕ್ಕೆ ಇಳಿದಿದ್ದಾರೆ.ಮಂಡ್ಯ ಲೋಕಸಭಾ ಕ್ಷೇತ್ರದಲ್ಲೇ ಇವತ್ತು ಮತಯಾಚಿಸಲಿರುವ ಕುಮಾರಸ್ವಾಮಿ, ನಾಳೆಯಿಂದ ಅಕ್ಟೋಬರ್ 31ರ ವರೆಗೂ ಶಿವಮೊಗ್ಗ ಉಪಸಮರದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಕ್ಯಾಂಪೇನ್ ಮಾಡಲಿದ್ದಾರೆ.31 ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಪ್ರಚಾರ ಮುಗಿಸಿದ ಬಳಿಕ, ಮೈಸೂರಿಗೆ ವಾಪಸ್ಸಾಗಲಿದ್ದಾರೆ. ನಂತರ ನವೆಂಬರ್ 1ರಂದು ರಾಮನಗರದಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಪರ ಮತಯಾಚಿಸಲಿದ್ದಾರೆ. ಅದೇ ದಿನ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತದೆ. ಹೀಗಾಗಿ ಕುಮಾರಸ್ವಾಮಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸೋ ಬಳ್ಳಾರಿ ಹಾಗೂ ಜಮಖಂಡಿಯಲ್ಲಿ ಪ್ರಚಾರ ನಡೆಸುವುದು ಡೌಟ್ ಎನ್ನಲಾಗ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





