Breaking News

ರಾಜ್ಯ ಸರ್ಕಾರಕ್ಕೆ ₹1 ಸಾವಿರ ದಂಡ ವಿಧಿಸಿದ ಹೈಕೋರ್ಟ್..

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ₹ ಒಂದು ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ ಟಿಪ್ಪು ಜಯಂತಿ ಆಚರಣೆಯನ್ನ ಪ್ರಶ್ನಿಸಿ ಮಡಿಕೇರಿ ಮೂಲದ ಮಂಜುನಾಥ್ ಅನ್ನೋರು ಹೈಕೋರ್ಟ್​ನಲ್ಲಿ ಪಿಐಎಲ್​ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆಯನ್ನ ಇಂದು ಹೈಕೋರ್ಟ್​ನ ವಿಭಾಗೀಯ ಪೀಠ ನಡೆಸಿತು. ಪಿಐಎಲ್​ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಸರ್ಕಾರದಿಂದ ಆಕ್ಷೇಪಣಾ ಅರ್ಜಿ ಸಲ್ಲಿಸಲು ಇಂದು ಕೊನೆ ದಿನವಾಗಿತ್ತು. ಆದರೆ ಸರ್ಕಾರ ಇದುವರೆಗೂ ಆಕ್ಷೇಪಣಾ ಅರ್ಜಿ ಸಲ್ಲಿಸಿರಲಿಲ್ಲ. ಈ ಸಂಬಂಧ ಗರಂ ಆದ ಹೈಕೋರ್ಟ್​​, ನವೆಂಬರ್ 9ರೊಳಗೆ ಆಕ್ಷೇಪಣಾ ಅರ್ಜಿ ಸಲ್ಲಿಸುವಂತೆ ತಾಕೀತು ಮಾಡಿತು. ಅಲ್ಲದೇ ಆಕ್ಷೇಪಣೆ ಸಲ್ಲಿಸಲು ವಿಳಂಬ ಮಾಡಿದ್ದಕ್ಕೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಂಡ ವಿಧಿಸಿದೆ.

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *