ಸಿಸಿಬಿ ಕಚೇರಿಗೆ ತಮ್ಮ ಲಾಯರ್ ಚಂದ್ರಶೇಖರ್ ಜೊತೆ ಹಾಜರಾಗುವುದಾಗಿ ಅಜ್ಞಾತ ಸ್ಥಳದಿಂದ ಮಾಜಿ ಸಚಿವ ಜನಾರ್ದನ ರೆಡ್ಡಿ ಈಗ್ಗೆ ಕೆಲ ಕ್ಷಣಗಳ ಹಿಂದೆ ವಿಡಿಯೋ ಮೂಲಕ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಜನಾರ್ದನ ರೆಡ್ಡಿ ನಮ್ಮ ಕಚೇರಿಗೆ ಬರುವ ಬಗ್ಗೆ ಸಿಸಿಬಿಗೆ ಯಾವುದೇ ಮಾಹಿತಿ ಇಲ್ಲ ಅಂತಾ ಹೇಳಿದ್ದಾರೆ.ಸಿಸಿಬಿ ಕಚೇರಿಯಲ್ಲಿ ಮಾತನಾಡಿದ ಅವರು, ಜನಾರ್ದನ ರೆಡ್ಡಿ ಬರುವ ಬಗ್ಗೆ ಸಿಸಿಬಿಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಬಂದ್ರೆ ಸಿಸಿಬಿ ಮುಂದಿನ ಕ್ರಮ ಕೈಗೊಳ್ಳುತ್ತೆ. ಅಂತಾ ಹೇಳಿದರು. ಆ್ಯಂಬಿಡೆಂಟ್ ಕಂಪನಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ವಿಚಾರಣೆಗೆ ಆಗಮಿಸುವಂತೆ ರೆಡ್ಡಿಗೆ ಸಿಸಿಬಿ ನೋಟಿಸ್ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





