ಬೆಂಗಳೂರು: ಕಬ್ಬು ಸೇರಿದಂತೆ ವಿವಿಧ ಬೆಳೆಗಳ ಬೆಂಬಲ ಬೆಲೆಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು ರಾಜಧಾನಿ ತಲುಪಿದೆ. ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಕರೆ ನೀಡಿರುವುದರಿಂದ ವಿವಿಧ ಜಿಲ್ಲೆಗಳಿಂದ ರೈತರು ನಗರದತ್ತ ಆಗಮಿಸುತ್ತಿದ್ದಾರೆ. ವಿಧಾನಸೌಧಕ್ಕೆ ರೈತರ ಮುತ್ತಿಗೆ ಸಾಧ್ಯತೆ ಹಿನ್ನೆಲೆಯಲ್ಲಿ, ಶಕ್ತಿಸೌಧ ವಿಧಾನಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ವಿಧಾನಸೌಧ ಸುತ್ತಮುತ್ತ ಭಾರೀ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ಪೋಲಿಸರನ್ನ ನಿಯೋಜನೆ ಮಾಡಲಾಗಿದೆ. ರಾಜ್ಯದ ವಿವಿಧೆಡೆಯಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿರುವ ಸಾವಿರಾರು ರೈತರು, ಹನ್ನೊಂದು ಗಂಟೆ ಸುಮಾರಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಯಿದೆ. ಹೀಗಾಗಿ ವಿಧಾನಸೌಧದ ಎಲ್ಲಾ ದ್ವಾರಗಳಲ್ಲೂ ವ್ಯಾಪಕ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ನಿನ್ನೆಯಷ್ಟೇ ಸಿಎಂ ಹೆಚ್.ಡಿ ಕುಮಾರಸ್ವಾಮಿ ರೈತರನ್ನ ಗೂಂಡಾಗಳಿಗೆ ಹೋಲಿಕೆ ಹಾಗೂ ರೈತ ಮಹಿಳೆ ಬಗ್ಗೆ ಹೇಳಿಕೆ ನೀಡಿದನ್ನ ಖಂಡಿಸಿ ಇಂದು ವಿಧಾನಸೌಧ ಮುತ್ತಿಗೆಗೆ ರೈತರು ನಿರ್ಧರಿಸಿದ್ದಾರೆ.ಅಷ್ಟಕ್ಕೂ ನಿನ್ನೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?
bigtvnews | Hubli Dharwad News | Kannada News | Karnataka News Hubli News | News In Hubli | Local news





