Breaking News

ಸಕ್ಕರೆ ಕಾರ್ಖಾನೆ ಮಾಲೀಕರ ಸಂಘದ ಅಧ್ಯಕ್ಷರಿಗೆ ಕನ್ನಡದಲ್ಲಿ ಮಾತಾಡಿ ಎಂದು ಎಚ್ಚರಿಸಿದ ಸಿಎಂ..

ಬೆಂಗಳೂರು: ಕಬ್ಬು ಬೆಳೆಗಾರರ ತೀವ್ರ ಪ್ರತಿಭಟನೆ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸುತ್ತಿದ್ದ ವೇಳೆ ಕನ್ನಡ ಭಾಷೆ ಮೇಲಿನ ಪ್ರೀತಿ ತೋರಿಸಿ ಗಮನ ಸೆಳೆದರು.ಕಳೆದ ಎರಡು ದಿನಗಳಿಂದ ಕಬ್ಬು ಬೆಳೆಗಾರರ ತೀವ್ರ ಆಕ್ರೋಶಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಗುರಿಯಾಗಿದ್ದರು. ಈ ಹಿನ್ನಲೆಯಲ್ಲಿ ನಿನ್ನೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಸಭೆ ನಡೆಸಿದರು. ಸಭೆ ವೇಳೆ ಸಕ್ಕರೆ ಕಾರ್ಖಾನೆ ಮಾಲಿಕರ ಸಂಘದ ಅಧ್ಯಕ್ಷ ವಿಜಯ್​ ರೆಡ್ಡಿಯವರನ್ನು ರೈತರಿಗೆ ಕೊಡಲು ಎಷ್ಟು ಹಣ ಬಾಕಿ ಉಳಿಸಿಕೊಂಡಿದ್ದೀರಿ ಮತ್ತು ಕಾರಣವೇನು ಎಂದು ಕೇಳಿದರು. ಅದಕ್ಕೆ ವಿಜಯ್​ ರೆಡ್ಡಿ ಆಂಗ್ಲ ಭಾಷೆಯಲ್ಲಿ ಉತ್ತರಿಸಲು ನೋಡಿದರು. ಇದರಿಂದ ಸಿಟ್ಟಿಗೆದ್ದ ಸಿಎಂ, ಕನ್ನಡದಲ್ಲಿ ಮಾತನಾಡಿ, ಇಂಗ್ಲೀಷ್​ನಲ್ಲಿ ಯಾಕೆ ಮಾತನಾಡುತ್ತಿದ್ದೀರಿ ಎಂದರು.ಮೂಲಗಳ ಪ್ರಕಾರ, ವಿಜಯ್​ ರೆಡ್ಡಿ ತಮಗೆ ಕನ್ನಡ ಬರುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದಾಗ ಕುಮಾರಸ್ವಾಮಿ ಇನ್ನಷ್ಟು ಕೋಪಗೊಂಡು, ಕನ್ನಡದಲ್ಲಿ ಮಾತನಾಡುವುದನ್ನು ಮೊದಲು ಕಲಿಯಿರಿ ಎಂದು ತರಾಟೆ ತೆಗೆದುಕೊಂಡಿದ್ದಾರೆ. ಜತೆಗೆ ಹೊರ ರಾಜ್ಯದವರನ್ನು ಕರ್ನಾಟಕ ಸಕ್ಕರೆ ಕಾರ್ಖಾನೆಗಳ ಸಂಘದ ಅಧ್ಯಕ್ಷರನ್ನಾಗಿ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು ಎಂದು ತಿಳಿದುಬಂದಿದೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *