ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ರೈತರ ವಿಚಾರದಲ್ಲಿ ಹೇಳಿದಂತೆ ನಡೆದುಕೊಂಡಿದ್ದಾರೆ. ಉತ್ತರ ಪ್ರದೇಶದ ರೈತರ ಸಾಲ ತೀರಿಸುವ ಮೂಲಕ ಎಲ್ಲರ ಕೀರ್ತಿಗೂ ಪಾತ್ರರಾಗಿದ್ದಾರೆ. ಈ ಬಗ್ಗೆ ಸ್ವತಃ ಅಮಿತಾಬ್ ಅವರೇ ತಮ್ಮ ಬ್ಲಾಗ್ನಲ್ಲಿ ಬರೆದುಕೊಂಡಿದ್ದು, ಉತ್ತರ ಪ್ರದೇಶದ ಸುಮಾರು 1,398 ರೈತರ 4 ಕೋಟಿ ಸಾಲವನ್ನು ಪಾವತಿಸಿ ಅವರಿಗೆ ನೆರವಾಗಿದ್ದೇನೆ ಎಂದು ತಿಳಿಸಿದ್ದಾರೆ.ಬಿಗ್ ಬಿ ಬ್ಲಾಗ್ನಲ್ಲಿ ಏನಿದೆ..?ಸಂಕಷ್ಟದಲ್ಲಿದ್ದ ಮಹಾರಾಷ್ಟ್ರದ 350 ರೈತರ ಸಾಲವನ್ನು ತೀರಿಸಿ ಅವರಿಗೆ ಈ ಹಿಂದೆ ನೆರವಾಗಿದ್ದೆ. ಈಗ ಉತ್ತರ ಪ್ರದೇಶದ ರೈತರನ್ನು ಗುರುತಿಸಿದ್ದೇನೆ. ಯುಪಿಯ ಒಟ್ಟು 1,398 ರೈತರ 4 ಕೋಟಿ ಸಾಲವನ್ನು ಪಾವತಿಸಿದ್ದೇನೆ. ರೈತರ ಸಾಲ ಮನ್ನಾ ಮಾಡಿ ನನಗೆ ತೃಪ್ತಿಯಾಗಿದೆ. ದೇಶಕ್ಕಾಗಿ ತ್ಯಾಗ ಮಾಡವುದು ರೈತರಿಗೆ ನೆರವು ನೀಡುವುದು ನಮ್ಮೆಲ್ಲರ ಕರ್ತವ್ಯ. ದೇಶದ ಹಲವು ಪ್ರದೇಶದಲ್ಲಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಅವರನ್ನ ಸಹಾಯ ಮಾಡುವುದು ಮುಖ್ಯ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





