ಲಖನೌ: ಉತ್ತರಪ್ರದೇಶದ ಬುಲಂದ್ಶಹರ್ನಲ್ಲಿ ನಿನ್ನೆ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಯೋಗೇಶ್ ರಾಜ್ ಬಜರಂಗದಳ ಕಾರ್ಯಕರ್ತನಾಗಿದ್ದು, ಗೋಹತ್ಯೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಈತನೇ ಎಂದು ವರದಿಯಾಗಿದೆ. ಅರಣ್ಯದಲ್ಲಿ 25 ಗೋವುಗಳ ಮೃತದೇಹಗಳು ಪತ್ತೆಯಾದ ಹಿನ್ನೆಲೆಯಲ್ಲಿ ಯೋಗೇಶ್ ರಾಜ್ ಗೋಹತ್ಯೆ ಬಗ್ಗೆ ದೂರು ದಾಖಲಿಸಿದ್ದ.ನಿನ್ನೆ ಬುಲಂದ್ಶಹರ್ನಲ್ಲಿ ಅಕ್ರಮ ಕಸಾಯಿಖಾನೆ ವಿರುದ್ಧ ಸ್ಥಳೀಯರು ಪ್ರತಿಭಟನೆಗಿಳಿದಿದ್ದರು. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಉದ್ರಿಕ್ತರು ಪೊಲೀಸ್ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಅವರನ್ನ ಹತ್ಯೆ ಮಾಡಿದ್ದಾರೆ. ಉದ್ರಿಕ್ತ ಪ್ರತಿಭಟನಾಕಾರರ ಗುಂಪು, ಪ್ರತಿಭಟನೆ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿತ್ತು. ಅಲ್ಲದೇ ಪೊಲೀಸ್ ವಾಹನ ಹಾಗೂ ಪೊಲೀಸ್ ಠಾಣೆಗೂ ಬೆಂಕಿ ಹಚ್ಚಿದ್ದರು. ಈ ಗಲಭೆಯಲ್ಲಿ ಜನರನ್ನ ನಿಯಂತ್ರಿಸಲು ಯತ್ನಿಸಿದ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಸುಬೋಧ್ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 27 ಜನರನ್ನ ಹೆಸರಿಸಿದ್ದಾರೆ. ಜೊತೆಗೆ 60 ಅಪರಿಚಿತ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





