Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಉತ್ತರಪ್ರದೇಶ ಪೊಲೀಸ್​ ಹತ್ಯೆ ಕೇಸ್​: ಐವರ ಬಂಧನ

ಲಖನೌ: ಉತ್ತರಪ್ರದೇಶದ ಬುಲಂದ್​ಶಹರ್​​ನಲ್ಲಿ ನಿನ್ನೆ ಪೊಲೀಸ್​ ಅಧಿಕಾರಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಯೋಗೇಶ್​​ ರಾಜ್​​​​​ ಬಜರಂಗದಳ ಕಾರ್ಯಕರ್ತನಾಗಿದ್ದು, ಗೋಹತ್ಯೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು ಈತನೇ ಎಂದು ವರದಿಯಾಗಿದೆ. ಅರಣ್ಯದಲ್ಲಿ 25 ಗೋವುಗಳ ಮೃತದೇಹಗಳು ಪತ್ತೆಯಾದ ಹಿನ್ನೆಲೆಯಲ್ಲಿ ಯೋಗೇಶ್​​ ರಾಜ್​​ ಗೋಹತ್ಯೆ ಬಗ್ಗೆ ದೂರು ದಾಖಲಿಸಿದ್ದ.ನಿನ್ನೆ ಬುಲಂದ್​​ಶಹರ್​​​ನಲ್ಲಿ ಅಕ್ರಮ ಕಸಾಯಿಖಾನೆ ವಿರುದ್ಧ ಸ್ಥಳೀಯರು ಪ್ರತಿಭಟನೆಗಿಳಿದಿದ್ದರು. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಉದ್ರಿಕ್ತರು ಪೊಲೀಸ್ ಇನ್ಸ್​ಪೆಕ್ಟರ್ ಸುಬೋಧ್ ಕುಮಾರ್ ಅವರನ್ನ ಹತ್ಯೆ ಮಾಡಿದ್ದಾರೆ. ಉದ್ರಿಕ್ತ ಪ್ರತಿಭಟನಾಕಾರರ ಗುಂಪು, ಪ್ರತಿಭಟನೆ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿತ್ತು. ಅಲ್ಲದೇ ಪೊಲೀಸ್​ ವಾಹನ ಹಾಗೂ ಪೊಲೀಸ್ ಠಾಣೆಗೂ ಬೆಂಕಿ ಹಚ್ಚಿದ್ದರು. ಈ ಗಲಭೆಯಲ್ಲಿ ಜನರನ್ನ ನಿಯಂತ್ರಿಸಲು ಯತ್ನಿಸಿದ ​ಇನ್ಸ್​ಪೆಕ್ಟರ್ ಸುಬೋಧ್ ಕುಮಾರ್ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರು. ಬಳಿಕ ಸುಬೋಧ್​ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 27 ಜನರನ್ನ ಹೆಸರಿಸಿದ್ದಾರೆ. ಜೊತೆಗೆ 60 ಅಪರಿಚಿತ ಆರೋಪಿಗಳ ವಿರುದ್ಧ ಕೇಸ್​ ದಾಖಲಾಗಿದೆ.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *