ಲಖೌನ್: ಬುಲಂದರ್ಶಹರ್ನಲ್ಲಿ ನಡೆದ ಪೊಲೀಸ್ ಇನ್ಸ್ಪೆಕ್ಟರ್ ಸುಭೋದ್ ಕುಮಾರ್ ಸಿಂಗ್ರ ಹತ್ಯೆಯ ಕಹಿ ಘಟನೆ ಇನ್ನೂ ಹಸಿ ಹಸಿಯಾಗಿದೆ. ಇದರ ಬೆನ್ನಲ್ಲೇ, ನಿನ್ನೆ ಗಾಜೀಪುರ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಪೇದೆಯೊಬ್ಬ ಮೃತಪಟ್ಟಿದ್ದಾರೆ.ಗಾಜೀಪುರ್ನಿಂದ 350ಕಿ.ಮೀ. ದೂರವಿರುವ ಕಥವಾದಲ್ಲಿ ಹತ್ಯೆ ನಡೆದಿದ್ದು, ಮೃತ ಪೇದೆಯನ್ನು ನಾನೆರಾ ಪೊಲೀಸ್ ಠಾಣೆಯ ಸುರೇಶ್ ವತ್ಸ್ ಎಂದು ಗುರುತಿಸಲಾಗಿದೆ. ನಿಶಾದ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ನಿಷಾದ್ ಪಾರ್ಟಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಇದಕ್ಕಾಗಿ, ಜಿಲ್ಲಾ ಹೆಡ್ ಕ್ವಾರ್ಟರ್ಸ್ ಬಳಿ ಧರಣಿ ನಡೆಸಲು ಅನುಮತಿ ಕೇಳಿದ್ರು. ಆದ್ರೆ ಮೋದಿಯ ಱಲಿ ಇದ್ದಿದ್ದರಿಂದ ಪ್ರತಿಭಟನೆಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ, ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ರು.ಇನ್ನು ಈ ಮಧ್ಯೆ ಱಲಿ ಮುಗಿಸಿಕೊಂಡ ಬರುತ್ತಿದ್ದ ಪೊಲೀಸರು, ಹೆದ್ದಾರಿಯಿಂದ ತೆರಳುವಂತೆ ಧರಣಿ ನಿರತರಿಗೆ ಸೂಚಿಸಿದ್ರು ಎನ್ನಲಾಗಿದೆ. ಇದ್ರಿಂದ ರೊಚ್ಚಿಗೆದ್ದ ಉದ್ರಿಕ್ತರು ಪೊಲೀಸರ ಮೇಲೆ ಕಲ್ಲೂ ತೂರಾಟ ನಡೆಸಿದ್ರು. ಈ ವೇಳೆ ಕಲ್ಲೇಟಿಗೆ ಸುರೇಶ್ ವತ್ಸ್ ಎಂಬ ಕಾನ್ಸ್ಟೇಬಲ್ ಬಲಿಯಾಗಿದ್ದಾನೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಯೋಗಿ ಆದಿತ್ಯನಾಥ್ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಅಲ್ಲದೇ ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ₹40 ಲಕ್ಷ ಹಾಗೂ ಹಾಗೂ ಪೇದೆಯ ಪೋಷಕರಿಗೆ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





