ಚಾಮರಾಜನಗರ: ಬೆಂಕಿ ಜ್ವಾಲೆಯಿಂದ ಕ್ಷಣಾರ್ಧದಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಪಾರಾದ ಘಟನೆ ನಡೆದಿದೆ. ಅಭಯಾರಣ್ಯದ ಸೂಕ್ಷ್ಮ ವಲಯದಲ್ಲಿ ಬರುವ ಮೇಲುಕಾಮನಹಳ್ಳಿ, ಕಾರೇಮಾಳ, ಮಗುವಿನಹಳ್ಳಿ ಕಾಲೋನಿಯ ಗುಡ್ಡಗಳಲ್ಲಿ ಬೆಂಕಿ ಕಾಣಿಸಿಕೊಂಡು 25 ಕ್ಕೂ ಹೆಚ್ಚಿನ ಎಕರೆ ಪ್ರದೇಶದ ಕಾಡು ಸುಟ್ಟು ಭಸ್ಮವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯ ಯುವಕರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.ಮೇಲುಕಾಮನಹಳ್ಳಿ ಬಳಿ ಖಾಸಗಿ ಜಮೀನಿನಲ್ಲಿ ಹಾಕಿದ್ದ ಬೆಂಕಿಯು ಗಾಳಿಯಿಂದ ಹರಡಿ ಸುಮಾರು ಒಂದು ಕಿಲೋ ಮೀಟರ್ ಕಾಡು ಭಸ್ಮವಾಗಿದೆ. ಇನ್ನು, ಇದೇ ವೇಳೆ ಸಿಬ್ಬಂದಿಗಳ ಕೊರತೆ, ಬೆಂಕಿ ನಂದಿಸಲು ಅಗತ್ಯ ಸಲಕರಣೆಗಳು ಇಲ್ಲದಿರುವುದರ ಕುರಿತು ಸ್ಥಳೀಯರು ಕಿಡಿಕಾರಿದ್ದಾರೆ.ಅದೃಷ್ಟವಶಾತ್ ಅನಾಹುತವೊಂದು ತಪ್ಪಿದರೂ ಅರಣ್ಯ ಇಲಾಖೆ ನಿರ್ಲಕ್ಷ್ಯದಡಿ ಪ್ರಕರಣ ದಾಖಲಿಸಿ ತಪ್ಪಿತಸ್ಥರನ್ನು ವಿಚಾರಣೆಗೊಳಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:Bigtvnews
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





