29 Jan 2019ಬೆಂಗಳೂರು: ದೂರು ನೀಡಲು ಬಂದ ಮಹಿಳೆ ಹಾಗೂ ಯುವತಿಯ ಕುತ್ತಿಗೆ ಹಿಡಿದು ಹೊರದಬ್ಬಿ, ಹಲ್ಲೆ ನಡೆಸಿದ್ದ ಎಎಸ್ಐ ರೇಣುಕಯ್ಯರನ್ನ ಅಮಾನತು ಮಾಡಲಾಗಿದೆ. ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ, ಕುಮಾರಸ್ವಾಮಿ ಠಾಣೆ ಎಎಸ್ಐ ರೇಣುಕಯ್ಯರನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ನೀಡಲು ಠಾಣೆಗೆ ಬಂದಿದ್ದ ಮಹಿಳೆ ಹಾಗೂ ಯುವತಿಯ ಮೇಲೆ ರೇಣುಕಯ್ಯ ದರ್ಪ ಮೆರೆದಿದ್ದರು. ಮಹಿಳೆ ಹಾಗೂ ಯುವತಿಯ ಕುತ್ತಿಗೆ ಹಿಡಿದು ಠಾಣೆಯಿಂದ ಹೊರದಬ್ಬಿ ಇಬ್ಬರ ಮೇಲೂ ಹಲ್ಲೆ ಮಾಡಿದ್ದರು. ಯೂನಿಫಾರ್ಮ್ನಲ್ಲಿ ಇಲ್ಲದಿದ್ರೂ ನ್ಯಾಯಕೇಳಲು ಬಂದ ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





