ಕುಂದಗೋಳ: ತಾಲೂಕಿನ ಎರಗುಪ್ಪಿ ಗ್ರಾಮದಲ್ಲಿಸರಿಯಾದ ಬಸ್ ವ್ಯವಸ್ಥೆ ಇಲ್ಲದಿರುವುದನ್ನು ಖಂಡಿಸಿ ಶಾಲಾಮಕ್ಕಳು ಇಂದು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ವ್ಯವಸ್ಥೆ ಸರಿಯಾಗಿಲ್ಲ ಅಲ್ಲದೇ ಶಾಲಾ ಕಾಲೇಜಿಗೆ ಹೋಗುವುದು ಕಷ್ಟಕರವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರುಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರ ತವರೂರರಲ್ಲಿಯೇ ಬಸ್ ವ್ಯವಸ್ಥೆ ಸರಿಯಾಗಿಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು ದಿನಗಳಿಂದ ಕೂಡ ಬಸ್ಸಿಗಾಗಿ ವಿದ್ಯಾರ್ಥಿಗಳು ಮನವಿ ಸಲ್ಲಿಸುತ್ತಿದ್ದಾರೆ. ಆದರೇ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





