ಹೊಸದಿಲ್ಲಿ: ಪಾಕಿಸ್ತಾನ ಸೆರೆಯಲ್ಲಿರುವ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಮಾರ್ಚ್ 01 ಶುಕ್ರವಾರದಂದು ತಾಯ್ನಾಡಿಗೆ ಮರಳುತ್ತಿದ್ದಾರೆ.
ರಾಜತಾಂತ್ರಿಕವಾಗಿ ತೀವ್ರ ಒತ್ತಡ ಹೇರಿರುವ ಹಿನ್ನಲೆಯಲ್ಲಿ ಕೊನೆಗೂ ಅಭಿನಂದನ್ ಬಿಡುಗಡೆ ಮಾಡಲು ಪಾಕಿಸ್ತಾನ ನಿರ್ಧರಿಸಿದೆ.
ಈ ಮೊದಲು ಗಡಿ ನಿಯಂತ್ರಣ ರೇಖೆಯಲ್ಲಿ ತಮ್ಮ ಜೀವವನ್ನೇ ಪಣವಾಗಿಟ್ಟ ಅಭಿನಂದನ್ ಮಿಗ್ 16 ವಿಮಾನ ಮೂಲಕ ಪಾಕಿಸ್ತಾನದ ಅತ್ಯಾಧುನಿಕ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದರು. ಈ ವೇಳೆ ಪ್ಯಾರಾಚೂಟ್ನಲ್ಲಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಇಳಿದಿದ್ದರು. ತಕ್ಷಣವೇ ಪಾಕ್ ಸೈನ್ಯವು ತನ್ನ ವಶಕ್ಕೆ ತೆಗೆದುಕೊಂಡಿತ್ತು. ಪಾಕಿಸ್ತಾನದ ಯಾವುದೇ ಒತ್ತಡಕ್ಕೆ ಭಾರತ ಮಣಿದಿರಲಿಲ್ಲ. ಅಲ್ಲದೆ ವಿಶ್ವ ರಾಷ್ಟ್ರಗಳ ಬೆಂಬಲ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಭಾರತೀಯ ಕ್ರಿಕೆಟಿಗರು ಅಭಿನಂದನ್ ಸುರಕ್ಷಿತವಾಗಿ ತಾಯ್ನಾಡಿಗೆ ಬರಲುತ್ತಿರುವುದನ್ನು ಸ್ವಾಗಿತಿಸಿದ್ದಾರೆ. ಅಲ್ಲದೆ ಟ್ವಿಟರ್ ಮೂಲಕ ತಮ್ಮ ಹೃತ್ಪೂರ್ವಕ ಸಂದೇಶಗಳನ್ನು ಹಂಚಿಕೊಂಡಿದ್ದಾರೆ. ಅಭಿನಂದನ್ ಬಂಧನದ ವೇಳೆ ಗೌತಮ್ ಗಂಬೀರ್ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ಅಲ್ಲದೆ ಅಭಿನಂದನ್ಗೆ ಚಿತ್ರಹಿಂಸೆ ನೀಡಿರುವ ಘಟನೆಯನ್ನು ಯಾವತ್ತೂ ಮರೆಯಲ್ಲ ಎಂದು ಹೇಳಿದ್ದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





