Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ತಾಯ್ನಾಡಿಗೆ ಮರಳಿದ ರಿಯಲ್ ಹೀರೋ ಅಭಿ; ಅದ್ದೂರಿ ಸ್ವಾಗತ, Z+ ಭದ್ರತೆ

ನವದೆಹಲಿ:ಅಂತಾರಾಷ್ಟ್ರೀಯ ಹಾಗೂ ಭಾರತದ ಒತ್ತಡಕ್ಕೆ ಮಣಿದ ಪಾಕಿಸ್ತಾನ ತನ್ನ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಸುರಕ್ಷಿತವಾಗಿ ಶುಕ್ರವಾರ ಮಧ್ಯಾಹ್ನ ವಾಘಾ ಗಡಿಯಲ್ಲಿ ಭಾರತದ ಅಧಿಕಾರಿಗಳಿಗೆ ಹಸ್ತಾಂತರಿಸಿದೆ.ಲಾಹೋರ್ ನಿಂದ ಅಟಾರಿ ವಾಘಾ ಗಡಿಗೆ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕ್ ಅಧಿಕಾರಿಗಳ ಜೊತೆ ಭಾರತೀಯ ವಾಯುಸೇನೆ ಸಲಹೆಗಾರ ಜಿಟಿ ಕುರಿಯನ್ ಕರೆತಂದಿದ್ದು, ಭಾರತೀಯ ಸೇನಾ ವರಿಷ್ಠರಿಗೆ, ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ಅಭಿನಂದನ್ ಪೋಷಕರು ಕೂಡಾ ಹಾಜರಿದ್ದರು.ಸೇನಾ ಮುಖ್ಯಸ್ಥರಿಗೆ ಝಡ್ ಪ್ಲಸ್ ಸೆಕ್ಯೂರಿಟಿ:ಭದ್ರತೆಯ ದೃಷ್ಟಿಯ ಹಿನ್ನೆಲೆಯಲ್ಲಿ ವಾಯಸೇನೆ, ನೌಕಾಸೇನೆ ಹಾಗೂ ಭೂಸೇನಾ ಮುಖ್ಯಸ್ಥರಿಗೆ ಝಡ್ ಪ್ಲಸ್ ಭದ್ರತೆಯನ್ನು ನೀಡಲಾಗಿದೆ. ಭದ್ರತೆಯ ನೆಲೆಯಲ್ಲಿ ವಾಘಾ ಗಡಿಯಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ಜಮಾಯಿಸಿದ್ದ ಸಾರ್ವಜನಿಕರನ್ನು ಸೇನೆ ತೆರವುಗೊಳಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಅಭಿನಂದನ್ ಹಸ್ತಾಂತರ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಸೇನೆ ಘೋಷಿಸಿದೆ.ವಾಘಾ ಅಟಾರಿ ಗಡಿಗೆ ಸೇನೆಯ ಅಧಿಕಾರಿಗಳು ಈಗಾಗಲೇ ಬಂದು ವಾಸ್ತವ್ಯ ಹೂಡಿದ್ದಾರೆ. ಪ್ರತಿ ದಿನ ನಡೆಯುತ್ತಿದ್ದ ಬೀಟಿಂಗ್ ರೀಟ್ರೀಟ್ ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಬೀಟಿಂಗ್ ರೀಟ್ರೀಟ್ ಗೂ ಮೊದಲೇ ಅಭಿನಂದನ್ ಅವರನ್ನು ತಮಗೆ ಹಸ್ತಾಂತರಿಸಬೇಕೆಂದು ಭಾರತ ಪಟ್ಟು ಹಿಡಿದಿತ್ತು.

  • ಅಭಿನಂದನ್ ಬಿಡುಗಡೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ:ಭಾರತದ ವಾಯುಸೇನೆ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಭಾರತಕ್ಕೆ ಹಸ್ತಾಂತರಿಬಾರದು ಎಂದು ತಡೆಕೋರಿ ಪಾಕ್ ಸಾಮಾಜಿಕ ಕಾರ್ಯಕರ್ತರು ಪಾಕ್ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಪಿಐಎಲ್ ಅನ್ನು ವಜಾಗೊಳಿಸಿದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *