ಈಜಲು ಕಾವೇರಿ ನದಿಗಿಳಿದ ಮೂರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಮಡಿಕೇರಿ ಜೂನಿಯರ್ ಕಾಲೇಜು ದ್ವಿತೀಯ ಪಿಯು ವಿದ್ಯಾರ್ಥಿಗಳಾದ ಆಕಾಶ್, ಶಶಾಂಕ್ ಮತ್ತು ಗಗನ್ ಮೃತ ದುರ್ದೈವಿಗಳು. ಕುಶಾಲನಗರ ಸರಕಾರಿ ಪಾಲಿಟೆಕ್ನಿಕ ಮುಂಭಾಗದ ಕಾವೇರಿ ನದಿಯಲ್ಲಿ ಈಜಲು ಹೋಗಿ ಮೃತ ಪಟ್ಟಿದ್ದಾರೆ. ಈ ಕುರಿತು ಸ್ಥಳಕ್ಕೆ ಕುಶಾಲನಗರ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





