ಕುಡಿದ ಅಮಲಿನಲ್ಲಿ ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸಮಂದೂರು ಬಳಿ ನಡೆದಿದೆ.ಸಮಂದೂರಿನ ಈರಣ್ಣ ಎಂಬುವವರ ತೋಟದ ಕೃಷಿ ಹೊಂಡದಲ್ಲಿ ನಡೆದಿರುವ ಘಟನೆಯಾಗಿದ್ದು, ಮೃತನನ್ನು ಆನೇಕಲ್ನ ರಾಚಮನಹಳ್ಳಿ ನಿವಾಸಿ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಈ ಕುರಿತು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





