Breaking News

ಬಿಆರ್​​ಟಿಎಸ್​ಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಬಿಆರ್​​ಟಿಎಸ್ ಯೋಜನೆಯ ಯಶಸ್ಸಿಗೆ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ರಾಷ್ಟ್ರೀಯ ಮಟ್ಟದಲ್ಲಿ ನಗರ ಸಮೂಹ ಸಾರಿಗೆ ವ್ಯವಸ್ಥೆಯಡಿ ಉತ್ತಮ ಚತುರ ನಗರ ಸಾರಿಗೆ ವರ್ಗದಡಿ ಕೊಡಮಾಡುವ 2021ನೇ ಸಾಲಿನ ಶ್ರೇಷ್ಠತಾ ಪ್ರಶಸ್ತಿ ಹುಬ್ಬಳ್ಳಿ-ಧಾರವಾಡ ಬಿಆರ್​ಟಿಎಸ್ ಯೋಜನೆಗೆ ಲಭಿಸಿದೆ.ಅ.29 ರಂದು ನವದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್ ಸಿಂಗ್ ಪುರಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು.ಕಾರ್ಯಕ್ರಮದಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯ ಆಯುಕ್ತೆ ವಿ.ಮಂಜುಲ, ಹೆಚ್​​ಡಿಬಿಆರ್​​ಟಿಎಸ್ ಕಂಪನಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಗುರುದತ್ತ ಹೆಗಡೆ ರಾಜ್ಯವನ್ನು ಪ್ರತಿನಿಧಿಸಿ ಪ್ರಶಸ್ತಿ ಸ್ವೀಕರಿಸಿದ್ದಾರೆ

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *