Breaking News

ಹುಬ್ಬಳ್ಳಿ : ೫೩೪ ನೇ ಕನಕ ಜಯಂತಿ ಅಂಗವಾಗಿ ಸಾಂಸ್ಕೃತಿಕ ನಗರಿ ಧಾರವಾಡ ಜಿಲ್ಲೆಯ ಸುಕ್ಷೇತ್ರ ಮನಸೂರಿನ ಜಗದ್ಗುರು ಶ್ರೀ ಮಠದ ವಿದ್ಯಾಪೀಠದ ಆಶ್ರಯದಲ್ಲಿ ಐದು ದಿನಗಳವರೆಗೆ ರಾಜ್ಯ ಮಟ್ಟದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ದಿ. ೨೦ ರಿಂದ ೨೪ ರ ವರೆಗೆ ಹಮ್ಮಿಕೊಳ್ಳಲಾಗಿದೆ

ಎಂದು ಮನಸೂರು ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾಮಠದದ ಶ್ರೀ ಬಸವರಾಜ ದೇವರು ತಿಳಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮನಸೂರು ಯಾಥ್ರಿ ಸಭಾಂಗಣದಲ್ಲಿ ಕನಕ ಪ್ರಶಸ್ತಿ ಪ್ರಧಾನ, ವಿವಿಧ ಕಲಾತಂಡಗಳ ಉತ್ಸವ, ಕವಿಗೋಷ್ಠಿ, ಕನಕ ಭಾಷಣ ಸ್ಪರ್ಧೆ, ಜವಳಿ ಇಲಾಖೆಯಿಂದ ಜವಳಿ ಉತ್ಪನ್ನ ವಸ್ತುಗಳ ಮಾರಾಟ ಮೇಳ, ವಿಚಾರ ಸಂಕೀರ್ಣ, ರಸಪ್ರಶ್ನೆ ಚರ್ಚೆ ಸೇರಿದಂತೆ

ಸಮಾರೋಪ ಸಮಾರಂಭ ಜರುಗಲಿವೆ ಎಂದು ತಿಳಿಸಿದರು.

ಈ ಸಮಾರಂಭದಲ್ಲಿ ನಾಡಿನ ಮಠಾಧೀಶರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳು, ಶಾಸಕರು, ಸಾಹಿತಿಗಳು, ಭಾಷಣಕಾರರು, ಚಲನಚಿತ್ರ, ರಂಗಭೂಮಿ ಕಲಾವಿದರು ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದರು .

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *