Breaking News

ಸಾಮೂಹಿಕ ವಿವಾಹದಲ್ಲಿ ಎಲ್ಲರ ಗಮನ ಸೆಳೆದ ಕುಬ್ಜ ಜೋಡಿ

ಬಾಗಲಕೋಟೆ: ಕುಬ್ಜ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಗಮನ ಸೆಳೆದ ಘಟನೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮಹೇಶ್ ಹೊಸಗೌಡ್ರ ಸಮುದಾಯ ಭವನದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಕುಬ್ಜ ಯುವಕ-ಯುವತಿ ಹಸೆಮಣೆ ಏರಿದ್ದು, ವಿಶೇಷವಾಗಿತ್ತು.

ಮೂಲತಃ ಬಾದಾಮಿ ತಾಲೂಕಿನ ಕುಟಕನಕೇರಿ ಗ್ರಾಮದ ನಿವಾಸಿ ರವಿ ನಾಯ್ಕರ್ (35) ಬೀಳಗಿ ಪಟ್ಟಣದ ಸುಜಾತ ತಳವಾರ (21) ಎಂಬ ಯುವತಿಯನ್ನು ವರಿಸಿದನು.ರವಿ ನಾಯ್ಕರ್​​ ಹುಬ್ಬಳ್ಳಿಯಲ್ಲಿ ಪಾನ್​ ಶಾಪ್​ ಹಾಕಿಕೊಂಡಿದ್ದಾನೆ. ಮದುವೆ ವಯಸ್ಸಾದರೂ, ತಕ್ಕ ಯುವತಿ ದೊರೆಯದ ಕಾರಣ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ. ಯುವತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಬ್ಬರು ಮದುವೆ ಆಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

Share News

About admin

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *