Breaking News

ಉದ್ಯೋಗ ಹೆಸರಿನಲ್ಲಿ ವ್ಯಕ್ತಿಗೆ 1.99 ಲಕ್ಷ ರೂ ಧೋಖಾ-ಎಚ್ಚರ ಸಾರ್ವಜನಿಕರೇ !

ಹುಬ್ಬಳ್ಳಿ: ಉದ್ಯೋಗಕ್ಕಾಗಿ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿದ ವ್ಯಕ್ತಿಯೊಬ್ಬರನ್ನು ಸಂಪರ್ಕಿಸಿ ಅವರ ಬ್ಯಾಂಕ್ ಖಾತೆಯಿಂದ 1,99,998 ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.

ಹಳೇ ಹುಬ್ಬಳ್ಳಿಯ ಎ.ಬಿ. ಯಾದವಾಡ (42) ವಂಚನೆಗೆ ಒಳಗಾದವರು. ಇವರು ನೌಕರಿ ಗಿಟ್ಟಿಸಲು ಹಲವು ವೆಬ್‌ಸೈಟ್‌ಗಳಲ್ಲಿ ಹೆಸರು ನೋಂದಾಯಿಸಿದ್ದರು. ನ. 12ರಂದು ಆದಿತ್ಯ ಶರ್ಮಾ ಎಂದು ಹೆಸರು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿಯೋರ್ವ, ಯಾದವಾಡ ಅವರ ಮೊಬೈಲ್‌ ಸಂಖ್ಯೆಗೆ ಸಂದೇಶ ಕಳುಹಿಸಿ ಅದನ್ನು ಓಪನ್ ಮಾಡಿ 10 ರೂ. ಹಣ ತುಂಬಿ ಎಲ್ಲ ವಿವರಗಳನ್ನು ದಾಖಲಿಸಿ ಎಂದು ಸೂಚಿಸಿದ್ದರು. ಅದರಂತ ಯಾದವಾಡ ಅವರು ಮಾಡಿದಾಗ ಅವರ ಖಾತೆಯಿಂದ ರೂ.99,998 ಕಡಿತವಾಗಿದೆ.

ಬಳಿಕ ಯಾದವಾಡ ಅವರು ತಮ್ಮ ಖಾತೆಯಿಂದ ಹಣ ಕಡಿತವಾಗಿರುವ ಕುರಿತು ದೂರಿದಾಗ ಅದಿತ್ಯ ಶರ್ಮಾ, ನಿಮ್ಮ ಹಣ ಖಾತೆಗೆ ಮರಳಿ ಬರುತ್ತದೆ. ಎಂದು ಹೇಳಿ ಇನ್ನೊಂದು ಮೊಬೈಲ್ ನಂಬರ್‌ಗೆ ಕರೆ ಮಾಡುವಂತೆ ಸೂಚಿಸುತ್ತಾರೆ. ಅದರಂತೆ ಯಾದವಾಡ ಅವರು ಇನ್ನೊಂದು ನಂಬರ್‌ಗೆ ಕರೆ ಮಾಡಿ ಅವರ ಸೂಚನೆಗಳನ್ನು ಪಾಲಿಸಿದಾಗ ಮತ್ತೆ ಅವರ ಬ್ಯಾಂಕ್ ಖಾತೆಯಿಂದ 99,999 ರೂ. ಹಣ ವರ್ಗಾವಣೆಯಾಗಿದೆ.

ಬಳಿಕ ಯಾದವಾಡ ಅವರು ಮತ್ತೆ ಆ ನಂಬರ್‌ಗೆ ಕರೆ ಮಾಡಿದರೆ ವಂಚಕರು ಫೋಸ್ ರಿವೀವ್ ಮಾಡಲಿಲ್ಲ. ಇದರಿಂದಾಗಿ ತಾವು ವಂಚನೆಗೆ ಒಳಗಾಗಿದ್ದು ತಿಳಿಸಿದು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಈ ಕುರಿತು ಹುಬ್ಬಳ್ಳಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *