
ಧಾರವಾಡ : ಜಿಲ್ಲೆಯಲ್ಲಿ ಇಂದು ಬೆಳಿಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅವಳಿ-ನಗರದ ಜನತೆ ಪರದಾಡುವಂತಾಗಿದೆ. ವಾಹನ ಸವಾರರಿಗೆ ಸಂಚಾರಕ್ಕೆ ಅಡೆತಡೆ ಉಂಟಾಯಿತು. ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ತೊಂದರೆ ಅನುಭವಿಸುವಂತಾಯಿತು. ಅಲ್ಲದೆ ಕೆಲ ಮನೆಗಳ ಮಾಳಿಗೆ ಹಾಗೂ ಗೋಡೆಗಳು ಸಹ ಕುಸಿದಿರುವುದು ಕಂಡು ಬಂತು. , ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊಲಗಳಲ್ಲಿ ನೀರು ನಿಂತು ಬೆಳೆಗಳು ಹಾನಿಯಾಗುವ ಪರಿಸ್ಥಿತಿ ಎದುರಾಗಿದೆ. ಇದರಿಂದ ರೈತರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news





