Breaking News

ಆರೋಗ್ಯ ಸಲಹೆ: ನೀವು ಸಕ್ಕರೆ ಪ್ರಿಯರೇ?.. ಅತಿ ಬಳಕೆಗೂ ಮೊದಲು ಕೊಂಚ ಯೋಚಿಸೋದು ಒಳ್ಳೇದು..

ಬೆಂಗಳೂರು : ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸ ಎನ್ನುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಹೇಳುತ್ತದೆ. ಸಕ್ಕರೆ ಸೇವನೆ ಒಂದು ರೀತಿಯ ಸ್ಲೋ ಪಾಯಿಸನ್ (ನಿಧಾನಗತಿಯ ವಿಷ).

ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆ ನಮ್ಮನ್ನು ಕಾಡುತ್ತದೆ. ಎಲ್ಲಾ ಬಗೆಯ ಆರೋಗ್ಯ ಸಮಸ್ಯೆಗೆ ಸಕ್ಕರೆಯೇ ಮುಖ್ಯ ಕಾರಣ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ?. ಖಂಡಿತ ಮಾಡಬಹುದು. ಎಷ್ಟು ಪ್ರಮಾಣದಲ್ಲಿ ಮಾಡಬೇಕು, ಯಾವ ಸಮಯದಲ್ಲಿ ಸಕ್ಕರೆಯುಕ್ತ ಪದಾರ್ಥಗಳ ಸೇವನೆ ಒಳ್ಳೆಯದು ಎಂಬುದರ ಬಗ್ಗೆ ಫೊರ್ಟಿಸ್ ಆಸ್ಪತ್ರೆ ಎಂಡೋಕ್ರೈನಾಲಜಿ ಕನ್ಸಲ್ಟೆಂಟ್ ಡಾ. ಶ್ರೀನಿವಾಸ್ ಪಿ. ಮುನಿಗೋಟಿ ಈಟಿವಿ ಭಾರತಕ್ಕೆ ಮಾಹಿತಿ ನೀಡಿದರು.

ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಸಕ್ಕರೆ ಸೇವನೆ ಒಳ್ಳೆಯದು?

ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ದಿನಕ್ಕೆ 2 ಚಮಚದಷ್ಟು ಸರಿದೂಗುವ ಸಕ್ಕರೆಯುಕ್ತ ಆಹಾರವನ್ನು ಮಾತ್ರ ನಾವು ಸೇವಿಸಬೇಕು. ಅಂದ್ರೆ 10 ಗ್ರಾಂನಷ್ಟು. ಅತಿಯಾದ ಸಕ್ಕರೆ ಸೇವನೆ ಹಲವು ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು.

ಸಕ್ಕರೆ ಎಂದಾಕ್ಷಣ ಜೇನುತುಪ್ಪ, ಬೆಲ್ಲ, ಸಿಹಿ ಇರುವ ಹಣ್ಣು,ಸಿಹಿಯನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಪರಿಗಣಿಸಲಾಗುತ್ತದೆ. ಇದು ನಾವು ದೈನಂದಿನ ಜೀವನದಲ್ಲಿ ಸೇವಿಸುವ ಕ್ಯಾಲೋರಿಗಳಲ್ಲಿ ಶೇ.5ರಷ್ಟು ಮೀರಿರಬಾರದು.ವಯಸ್ಕರು ಪ್ರತಿದಿನ 30 ರಿಂದ 35 ಗ್ರಾಂ ಗಿಂತ ಹೆಚ್ಚು ಸಕ್ಕರೆಯುಕ್ತ ಆಹಾರ ಸೇವಿಸಬಾರದು. 4 ರಿಂದ 6 ವರ್ಷ ವಯಸ್ಸಿನ ಮಕ್ಕಳು ದಿನಕ್ಕೆ 19 ಗ್ರಾಂ ಗಿಂತ ಹೆಚ್ಚು ಸಕ್ಕರೆ ಸೇವಿಸಬಾರದು. 7 ರಿಂದ 10 ವರ್ಷ ವಯಸ್ಸಿನ ಮಕ್ಕಳು 24 ಗ್ರಾಂಗಿಂತ ಸಕ್ಕರೆ ಪ್ರಮಾಣ ಹೆಚ್ಚಾಗಿ ತೆಗೆದುಕೊಳ್ಳಬಾರದು.

ಅಮೆರಿಕನ್ ಹಾರ್ಟ್ ಅಸೋಸಿಯೇಷನ್ (ಹೆಚ್‌ಎ) ಪ್ರಕಾರ, ಪುರುಷರು ದಿನಕ್ಕೆ 9 ಟೀ ಚಮಚದಷ್ಟು (36 ಗ್ರಾಂ ಅಥವಾ 150 ಕ್ಯಾಲೋರೀಸ್) ಮಾತ್ರ ಸಕ್ಕರೆ ಪ್ರಮಾಣದ ಆಹಾರ ಸೇವಿಸಬೇಕು. ಮಹಿಳೆಯರು 6 ಟೀ ಚಮಚ ಅಂದರೆ, 25 ಗ್ರಾಂ ಅಥವಾ 100 ಕ್ಯಾಲೋರಿಗಳಷ್ಟು ಮಾತ್ರ ಸಕ್ಕರೆಯುಕ್ತ ಆಹಾರ ಸೇವಿಸಬಹುದು ಎಂದು ಶಿಫಾರಸು ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಸಂಸ್ಕರಿಸಿದ ಆಹಾರದಲ್ಲಿ ಸಕ್ಕರೆ ಪ್ರಮಾಣ ಇರಲಿದೆಯೇ? ಎನ್ನುವ ನಮ್ಮ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಿಸರ್ವೇಟಿವ್ ಆಹಾರಗಳಲ್ಲಿ ಹೆಚ್ಚು ಸಕ್ಕರೆ ಪ್ರಮಾಣ ಇರಲಿದೆ. ಹೀಗಾಗಿ, ಇಂಥ ಆಹಾರಗಳನ್ನು ಸಾಧ್ಯವಾದಷ್ಟು ನಿಯಂತ್ರಿಸಬೇಕು ಎಂದಿದ್ದಾರೆ.

ಮೊದಲು ನಿಮ್ಮ ದೇಹದ ತೂಕ ಹಾಗೂ ಎತ್ತರಕ್ಕೆ ಅನುಗುಣವಾಗಿ ಎಷ್ಟು ಕ್ಯಾಲೋರಿಸ್ ಸೇವಿಸಬೇಕು ಎಂದು ತಿಳಿದುಕೊಳ್ಳಿ. ನಂತರ ಖರೀದಿಸುವ ಪ್ರಿಸರ್ವೇಟಿವ್ ಆಹಾರದ ಪ್ಯಾಕೇಟ್ ಮೇಲೆ ಜೇನುತುಪ್ಪ, ಸಾವಯವ ಕಬ್ಬಿನ ಸಕ್ಕರೆ ಕಾಣಿಸಿಕೊಂಡರೆ ಎಷ್ಟು ಪ್ರಮಾಣದಲ್ಲಿ ಹಾಕಲಾಗಿದೆ ಎಂದು ಮಾಹಿತಿ ಪಡೆಯಿರಿ ಎಂದು ಜನರಿಗೆ ಸಲಹೆ ನೀಡಿದ್ದಾರೆ.

Share News

About admin

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *