Breaking News

ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ ಲಿಂಗೈಕ್ಯ

ಗದಗ: ಗಜೇಂದ್ರಗಡ ತಾಲೂಕಿನ ಹಾಲಕೇರಿ ಮಠದ ಪೀಠಾಧಿಪತಿ ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿ (85) ಲಿಂಗೈಕ್ಯರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಹಾಲಕೇರಿ ಮಠದ ಪೀಠಾಧಿಪತಿ ಅಭಿನವ ಅನ್ನದಾನೇಶ್ವರ ಮಹಾ ಸ್ವಾಮೀಜಿ ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆ ಉಸಿರೆಳೆದಿದ್ದಾರೆ.

ಶಿವಯೋಗ ಮಂದಿರ ಅಧ್ಯಕ್ಷರು ಆಗಿದ್ದ ಸ್ವಾಮೀಜಿ ಅವರು ನವೆಂಬರ್ 8, 9, 10ರಂದು ಮಠಕ್ಕೆ ನೂತನ ಚಿರ ಪಟ್ಟಾಧಿಕಾರ ಕಾರ್ಯಕ್ರಮ ನಡೆಸಿದ್ದರು. ತಮ್ಮ ಸ್ಥಾನಕ್ಕೆ ನೂತನವಾಗಿ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅವರನ್ನು ನೇಮಿಸಿದ್ದರು.

ಗದಗ, ಹಾಲಕೇರಿ, ಬಳ್ಳಾರಿ, ಹೊಸಪೇಟೆ ಅನೇಕ ಶಾಖಾ ಮಠಗಳ ಉತ್ತರಾಧಿಕಾರಿಯಾಗಿದ್ದ ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮೀಜಿಯವರ ನಿಧನ ಸುದ್ದಿ ಕೇಳಿ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಸ್ವಾಮೀಜಿಯವರ ಪಾರ್ಥಿವ ಶರೀರ ಇಂದು ಮಧ್ಯಾಹ್ನ ಹಾಲಕೇರಿ ಗ್ರಾಮಕ್ಕೆ ಬರಲಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *