
ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅಕ್ಕಿಪೇಟೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ತಮ್ಮ ಮನೆಯ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಅಕ್ಕಿಪೇಟೆ ನಿವಾಸಿ ದೂದ್ ರಾಮ್ ಮಾಲಿಯ ಎಂಬುವರ ಮಗಳು ಮೃತ ಬಾಲಕಿ ಎಂದು ತಿಳಿದು ಬಂದಿದೆ. ಕಳೆದ ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ. ಘಟನೆ ನಂತರ ಬಾಲಕಿ ತಂದೆ ಮಗಳ ಸ್ನೇಹಿತನಾಗಿದ್ದ ಬಾಲಕನ ವಿರುದ್ಧ ದೂರು ನೀಡಿದ್ದಾರೆ. ಮಗಳ ಸಾವಿನ ಹಿಂದೆ ಆತನ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬಾಲಕಿಯ ಮೊಬೈಲ್ ನಂಬರ್ ಡಿಟೇಲ್ಸ್ ಹಾಗೂ ಇತರೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೂಲಗಳ ಮಾಹಿತಿ ಪ್ರಕಾರ ಬಾಲಕಿ ಹಲವು ದಿನಗಳಿಂದ ಸಹಪಾಠಿ ಬಾಲಕನನ್ನು ಪ್ರೀತಿಸುತ್ತಿದ್ದಳು. ಇದಕ್ಕೆ ಆತ ಒಲ್ಲೆ ಎಂದಿದ್ದ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

