
ದಾವಣಗೆರೆ : ಸಂಬಂಧಿಕರು, ಅಣ್ಣಂದಿರು ಬಾರದಿದ್ರೆ ಮದುವೆ ಆಗುವುದಿಲ್ಲ, ಅವರು ಬಂದು ಅಕ್ಷತೆ ಹಾಕಿದರೆ ಮಾತ್ರ ಹಸೆಮಣೆ ಏರುತ್ತೇನೆ ಎಂದು ಹೇಳೋದು ಸಾಮನ್ಯ. ಆದ್ರೆ ನಗರದ ಯುವತಿಯೊಬ್ಬಳು ತನ್ನ ಮೆಚ್ಚಿನ ನಟ ದುನಿಯಾ ವಿಜಯ್ ತನ್ನ ಮದುವೆಗೆ ಬಂದು ಅಕ್ಷತೆ ಹಾಕಿ ಆಶೀರ್ವಾದ ಮಾಡಿದ್ರೆ ಮಾತ್ರ ಮದುವೆಯಾಗುವುದಾಗಿ ಹಠ ಹಿಡಿದಿದ್ದಾರೆ.
ನಗರದ ರಾಮನಗರದ ಅನುಷ ಹಠ ಹಿಡಿದ ಯುವತಿಯಾಗಿದ್ದು, ಅನುಷ ಕುಟುಂಬಸ್ಥರೆಲ್ಲರೂ ದುನಿಯಾ ವಿಜಯ್ ಅಭಿಮಾನಿಗಳಾಗಿದ್ದಾರೆ. ಕಳೆದ ಐದು ವರ್ಷದ ಹಿಂದೆ ಅನುಷ ತಂದೆ ಶಿವಾನಂದ್ ಮನೆ ಕಟ್ಟಿಸಿ ಅದಕ್ಕೆ ದುನಿಯಾ ಋಣ ಎಂದು ಹೆಸರಿಟ್ಟಿದ್ದರು. ಅಲ್ಲದೆ ದುನಿಯಾ ವಿಜಯ್ ಬರೋವರೆಗೂ ಮನೆ ಓಪನಿಂಗ್ ಮಾಡೋದಿಲ್ಲ ಎಂದು ಹಾಗೆಯೇ ಬಿಟ್ಟಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

