Breaking News

ಪರಿಷತ್ ಚುನಾವಣೆ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲಾಗಿದೆ: ಸಿಎಂ

ತುಮಕೂರು: ವಿಧಾನ ಪರಿಷತ್ ಚುನಾವಣೆ ಗೆಲುವಿಗಾಗಿ ಈಗಾಗಲೇ ಕಾರ್ಯತಂತ್ರ ರೂಪಿಸಲಾಗಿದ್ದು, ಜಿಲ್ಲೆಯ ಎಲ್ಲಾ ಮುಖಂಡರ ಜೊತೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಎನ್ ಲೋಕೇಶ್ ಗೆಲ್ಲಲಿದ್ದಾರೆ. ಒಟ್ಟು 20 ಸ್ಥಾನಗಳಲ್ಲಿ ಹದಿನೈದು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ನಮಗಿದೆ ಎಂದರು.

ಎಸಿಬಿ ದಾಳಿ ಬಳಿಕ ಕಾನೂನು ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು. ಅಲ್ಪಾವಧಿಯಲ್ಲಿ ಚಾರ್ಜ್ ಶೀಟ್ ಹಾಕುವ ಹಾಗೆ ನಿಯಮ ರೂಪಿಸಲಾಗುವುದು. ಎಸಿಬಿ ಹೊರತುಪಡಿಸಿ ಲೋಕಾಯುಕ್ತ ಬಲಪಡಿಸುವ ಯೋಚನೆ ಇಲ್ಲ. ಎಸಿಬಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. ಮುಂದಿನ ದಿನಗಳಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಮತ್ತಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *