Breaking News

ಲಖನ್ ಸ್ಪರ್ಧಿಸಿದ್ದು ಒಳ್ಳೆಯದೇ ಆಯ್ತು: ರಮೇಶ್ ಜಾರಕಿಹೊಳಿ‌ ಅಚ್ಚರಿಯ ಹೇಳಿಕೆ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇ ಒಳ್ಳೆಯದಾಯ್ತು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ‌ ಅಚ್ಚರಿಯ ಹೇಳಿಕೆ ನೀಡಿದರು.

ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಾನೇ ನಿಲ್ಲಿಸಿದ್ದೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಮೊದಲು ಬಿಜೆಪಿ ಗೆಲ್ಲಿಸಬೇಕು, ನಂತರ ಕಾಂಗ್ರೆಸ್ ಅನ್ನು ಸೋಲಿಸಬೇಕು. ಮಹಾಂತೇಶ ಕವಟಗಿಮಠ ಸ್ವಾಮೀಜಿಗಳು ಲಿಂಗಾಯತರ ದೊಡ್ಡ ಸಂಸ್ಥೆಯಾದ ಕೆಎಲ್‌ಇ ನಿರ್ದೇಶಕರು. ಆದರೆ ಸದ್ಯ ಇರುವ ಲಿಂಗಾಯತ ನಾಯಕಿಯ ಬಗ್ಗೆ ನಾನು ವೈಯಕ್ತಿಕವಾಗಿ ಮಾತನಾಡಲ್ಲ, ದಯವಿಟ್ಟು ನೀವೇ ವಿಚಾರ ಮಾಡಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಲಖನ್ ಜಾರಕಿಹೊಳಿ ಪಕ್ಷೇತರ ನಿಂತಿದ್ದು ಬಹಳ ಖುಷಿಯಾಗಿದೆ. ಲಖನ್ ಜಾರಕಿಹೊಳಿ ನಿಂತಿದ್ದೇ ಒಳ್ಳೆಯದಾಯ್ತು, ಇಲ್ಲವಾದರೆ ಅವಿರೋಧ ಆಯ್ಕೆ ಆಗುತ್ತಿತ್ತು. ಲಖನ್ ಜಾರಕಿಹೊಳಿ ಧೈರ್ಯ ಮಾಡದಿದ್ರೆ ಪರಿಸ್ಥಿತಿ ಬೇರೆ ಇರುತ್ತಿತ್ತು ಎಂದು ರಮೇಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *