ಹುಬ್ಬಳ್ಳಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಪೊಲೀಸರು ಹುಬ್ಬಳ್ಳಿ 1ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಗೌರಿ ಹತ್ಯೆ ಪ್ರಕರಣದಲ್ಲಿ ಬೈಕ್ ಬಳಸಲಾಗಿತ್ತು. ಆ ಬೈಕನ್ನು ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ.

ಮಧ್ಯಾಹ್ನ 3 ಗಂಟೆಗೆ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನಂತರ ಮುಂಬೈಗೆ ಕಳುಹಿಸಲಾಗುವುದು ಎಂದು ಗ್ರಾಮೀಣ ಠಾಣೆ ಸಿಪಿಐ ರಮೇಶ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

