ಹುಬ್ಬಳ್ಳಿ: ಪ್ರಸಕ್ತ ವರ್ಷದ ತರಗತಿ ಆರಂಭಿಸಬೇಕು ಹಾಗೂ ಆನ್ ಲೈನ್ ಪರೀಕ್ಷೆ ನಡೆಸಬೇಕು ಎಂಬ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದ ನವನಗರದಲ್ಲಿ ಕಾನೂನಿನ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಹಲವು ದಿನಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ಕೆಲ ದಿನಗಳಿಂದಷ್ಟೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೂ ಬೇಡಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ್ದರು.
ಇದರ ಬೆನ್ನಲ್ಲೇ ನವನಗರದ ಆರ್.ಟಿ.ಓ ಕಚೇರಿಯಿಂದ ಕಾನೂನು ವಿವಿವರೆಗೂ ವಿವಿಧ ಜಿಲ್ಲೆಗಳಿಂದ ಬಂದಂತಹ ನೂರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಕಾನೂನು ವಿವಿ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

