Breaking News

ಸಾವಿರ ‘ಕೋಟಿ’ ಗಳಿದ್ದರೂ ಅದೃಷ್ಟ ಖೋತಾ: ಪರಿಷತ್ ಚುನಾವಣೆಯಲ್ಲಿ ‘ಕೆಜಿಎಫ್ ಬಾಬು’ ಗೆ ಹೀನಾಯ ಸೋಲು!

ಬೆಂಗಳೂರು: ಬೆಂಗಳೂರು ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್.ಎಸ್. ಗೋಪಿನಾಥ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ, ಸಾವಿರಾರು ಕೋಟಿಯ ಒಡೆಯ ಯೂಸೂಫ್‌ ಶರೀಫ್‌ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಎಚ್‌.ಎಸ್‌.ಗೋಪಿನಾಥ್, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯೂಸಫ್‌ ಷರೀಫ್‌ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಕಣದಲ್ಲಿದ್ದರು.

ಬಿಜೆಪಿ ಅಭ್ಯರ್ಥಿಯಾಗಿ ಎಚ್‌.ಎಸ್‌.ಗೋಪಿನಾಥ್, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಯೂಸಫ್‌ ಷರೀಫ್‌ ಮತ್ತು ಪಕ್ಷೇತರ ಅಭ್ಯರ್ಥಿ ಶೀನಪ್ಪ ಕಣದಲ್ಲಿದ್ದರು. ಆದರೆ, ಗೋಪಿನಾಥ್‌ ಮತ್ತು ಯೂಸೂಫ್‌ ಶರೀಫ್‌ ನಡುವೆ ನೇರ ಹಣಾಹಣಿ ಇತ್ತು. ಗೋಪಿನಾಥ್‌ ಈ ಹಿಂದೆ ಕೂಡ ಚುನಾವಣಾ ಕಣಕ್ಕಿಳಿದಿದ್ದು, ಕೆಲವೇ ಮತಗಳ ಅಂತರಲ್ಲಿ ಸೋಲನ್ನು ಅನುಭವಿಸಿದ್ದರು. ಬಿಇ ಪದವೀಧರ ಆಗಿರುವ ಗೋಪಿನಾಥ್‌ ಅವರು ಬಿಜೆಪಿಯಲ್ಲಿ ಹಲವು ಹುದ್ದೆ ನಿರ್ವಹಿಸಿದ್ದರು. ಪಕ್ಷವೇ ಆಡಳಿತದಲ್ಲಿರುವ ಕಾರಣ ಸರ್ಕಾರದ ಅಭಿವೃದ್ಧಿ ಕಾರ್ಯ ಮುಂದಿಟ್ಟು ಮತ ಕೇಳಿ ಜಯ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್‌ನ ಯೂಸೂಫ್‌ ಶರೀಫ್‌ ಅಲಿಯಾಸ್ ಕೆಜಿಎಫ್ ಬಾಬು ರಾಜಕೀಯದಲ್ಲಿ ಅತ್ಯಂತ ಶ್ರೀಮಂತ ವ್ಯಕ್ತಿ ಎನಿಸಿಕೊಂಡಿದ್ದಾರೆ. ಆದ್ರೆ ಪರಿಷತ್ ಚುನಾವಣೆಯಲ್ಲಿ ಸೋಲುಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಎಂಟಿಬಿ ನಾಗರಾಜ್ ಅವರನ್ನೂ ಮೀರಿಸಿ 1743 ಕೋಟಿ ರು. ಆಸ್ತಿಯ ಒಡೆಯನಾಗಿರುವುದು ಚುನಾವಣಾ ಅಖಾಡದಲ್ಲಿ ಗಮನ ಸೆಳೆದಿತ್ತು.

ಸಾವಿರಾರು ಕೋಟಿಯ ಒಡೆಯರಾಗಿರುವ ಕೆಜಿಎಫ್ ಬಾಬು ನಾಮಪತ್ರ ಸಲ್ಲಿಸಲು ಬರುವಾಗ ಐಷಾರಾಮಿ ಕಾರಿನಲ್ಲಿ ಆಗಮಿಸಿದ್ದರು. ಇಂದು ಫಲಿತಾಂಶ ಹೊರ ಬೀಳುತ್ತಿದ್ದಂತೆ ಯಾವುದೇ ಪ್ರತಿಕ್ರಿಯೆ ನೀಡದೇ ಆಟೋ ಹತ್ತಿ ತೆರಳುವ ಮೂಲಕ ಅಚ್ಚರಿ ಮೂಡಿಸಿದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *